ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಆಗ್ರಹ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ದೇವದುರ್ಗ ತಾಲೂಕಿನ ಜಾಲಹಳ್ಳಿ ಹೋಬಳಿಗೆ. ಬರುವ ಸೋಮನಮರಡಿ,ಗಲಗ, ಚಿಂಚೋಡಿ, ಅಮಪೂರ, ಮುಂಡರಗಿ ಜಾಲಹಳ್ಳಿಗಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳಿಗಾಗಿ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದರು. ಮನವಿ ಪತ್ರದಲ್ಲಿ ಕಳೆದ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ  ಮೂಲಭೂತ ಸೌಕರ್ಯಗಳ ಬಗ್ಗೆ ಗಮನ ಹರಿಸಬೇಕು, ಹಾಗೂ ಉದ್ಯೋಗ ಖಾತ್ರಿ ಬಯಸಿ ಬಂದ ಕೂಲಿ ಕಾರ್ಮಿಕರಿಗೆ ತಕ್ಷಣವೇ ಉದ್ಯೋಗ ಖಾತ್ರಿ ಕೆಲಸ ನೀಡಬೇಕು. ಪಂಚಾಯ್ತಿಗೆ ಬರುವ  ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಗ್ರಾಮಗಳಲ್ಲಿ ಮಹಿಳೆಯರಿಗಾಗಿ ಹೈಟೆಕ್ ಶೌಚಾಲಯ ನಿರ್ಮಿಸಬೇಕು, ದನದ ಕೊಟ್ಟಿಗೆ ನಿರ್ಮಿಸಲು ಬಯಸಿದ ರೈತರಿಗೆ ತಕ್ಷಣವೇ ದನದ ಕೊಟ್ಟಿಗೆ ನಿರ್ಮಿಸಿಕೊಡಬೇಕು, ಮತ್ತು ಗ್ರಾಮಗಳಲ್ಲಿ ಅವಶ್ಯಕತೆ ಇದ್ಧ ಸ್ಥಳಗಳಲ್ಲಿ ವಿದ್ಯುತ್ ಕಂಬ ಒದಗಿಸಬೇಕು, ಶೌಚಾಲಯಕ್ಕೆ ಅರ್ಜಿ ಸಲ್ಲಿಸಿದವರಿಗೆ ತಕ್ಷಣವೇ ಶೌಚಾಲಯ ನಿರ್ಮಿಸಿ ಕೊಡಬೇಕು. ಅಲ್ಲದೇ ವಸತಿ ರಹಿತರಿಗೆ ವಸತಿ ನಿರ್ಮಿಸಿಕೊಡಬೇಕು. ಮತ್ತು ಇನ್ನು ಹಲವು ಬೇಡಿಕೆಗಳನ್ನು ಇಟ್ಟುಕೊಂಡು ಒಟ್ಟು ಆರು ಪಂಚಾಯಿತಿ ಮುಂದೆ ಪ್ರತಿಭಟನೆ ಮಾಡಿ ಅಭಿವೃದ್ಧಿ ಅಧಿಕಾರಿಗಳಿಗೆ ಕರ್ನಾಟಕ ಪ್ರಾಂತ ರೈತ ಸಂಘದಿಂದ ಮನವಿ ಪತ್ರ ಸಲ್ಲಿಸಿಲಾಯಿತು

Please follow and like us:

Leave a Reply

Your email address will not be published. Required fields are marked *

Next Post

ಕೆ.ಎಸ್.ಆರ್.ಟಿ.ಸಿ.ಯಿಂದ ಅಪಘಾತ ವಾಸ್ತವತೆ ಪತ್ತೆಗೆ ಕ್ರಮ  

Mon Jul 20 , 2020
ಪ್ರಯಾಣಿಕರು ಹಾಗೂ ಸಿಬ್ಬಂದಿಯ ಸುರಕ್ಷತೆಯನ್ನು ಮುಂದಿಟ್ಟುಕೊAಡು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಬಸ್‌ನ ಮುಂಭಾಗದಲ್ಲಿ ಕೆಮರಾಗಳನ್ನು ಅಳವಡಿಸಲು ನಿರ್ಧರಿಸಿದೆ. ಅಪಘಾತದ ಸಮಯದಲ್ಲಿ ವಾಸ್ತವತೆ ತಿಳಿದುಕೊಳ್ಳುವ ನಿಟ್ಟಿನಲ್ಲಿ ಈ ಕೆಮರಾ ಸಹಕಾರಿಯಾಗಲಿದೆ. ಕೆಲವೊಮ್ಮೆ ಬಸ್ ಚಾಲಕನ ತಪ್ಪಿಲ್ಲದಿದ್ದರೂ ಅವರೇ ಹೊಣೆಗಾರರಾಗುವ ಸಾಧ್ಯತೆಯಿದೆ. ಇದನ್ನು ತಪ್ಪಿಸಲು ನೈಜ ಘಟನೆ ತಿಳಿಯುವ ನಿಟ್ಟಿನಲ್ಲಿ ಕೆಮರಾ ಸಹಕಾರಿಯಾಗಲಿದೆ. ಈ ಸಂಬAಧ ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ಚರ್ಚೆ ನಡೆಸಲಾಗಿದೆ. ಮೊದಲ ಹಂತದಲ್ಲಿ ಪ್ರಧಾನ ಕಚೇರಿಯ ಕೆಲವು ಬಸ್‌ಗಳಿಗೆ […]

Advertisement

Wordpress Social Share Plugin powered by Ultimatelysocial