ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸದಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ ಅರ್ಜಿ ಇತ್ಯರ್ಥ ಮಾಡಿದೆ. ಸರ್ಕಾರದಿಂದ ಪರೀಕ್ಷೆ ನಡೆಸಲು ಮಾಡಿಕೊಂಡಿರುವ ವ್ಯವಸ್ಥೆ ಬಗ್ಗೆ ಹೈಕೋರ್ಟ್ ಮಾಹಿತಿ ಕೇಳಿತ್ತು. ಅದರಂತೆ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮಾರ್ಗಸೂಚಿಗಳನ್ನು ಸಲ್ಲಿಸಿತ್ತು. ಇದನ್ನು ಪುರಸ್ಕರಿಸಿದ ಹೈಕೋರ್ಟ್ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಪರೀಕ್ಷೆ ನಡೆಸಬೇಕು. ಯಾವುದೇ ವಿದ್ಯಾರ್ಥಿಗೆ ಇದರಿಂದ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ.

Please follow and like us:

Leave a Reply

Your email address will not be published. Required fields are marked *

Next Post

ಮನೆ, ಕಟ್ಟಡ ನಿರ್ಮಿಸುವವರಿಗೆ ಸಿಹಿ ಸುದ್ದಿ

Wed May 27 , 2020
ಕೊಟ್ಟೂರು ತಾಲ್ಲೂಕಿನಲ್ಲಿ ಜನರಿಗೆ ಸುಲಭವಾಗಿ ಮರಳು ಸಿಗುವಂತೆ ಮಾಡಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಮರಳು ನಿಕ್ಷೇಪವನ್ನು ಗುರುತಿಸುವ ಕಾರ್ಯಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ತಹಶೀಲ್ದಾರ್ ಅನಿಲ್ ಕುಮಾರ್ ಹೇಳಿದ್ದಾರೆ. ಮರಳು ಮಾಫಿಯಾ ಮತ್ತು ಕೃತಕ ಮರಳು ಅಭಾವ ತಪ್ಪಿಸುವ ಉದ್ದೇಶದಿಂದ ಹೊಸ ಮರಳು ನೀತಿ ಜಾರಿಗೆ ತರಲಾಗಿದೆ ಎಂದು ಮಾಹಿತಿ ನೀಡಿದ್ದು, ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ವಿವಿಧ ಇಲಾಖೆ ಅಧಿಕಾರಿಗಳು ಸಮಿತಿಯಲ್ಲಿರುತ್ತಾರೆ. […]

Advertisement

Wordpress Social Share Plugin powered by Ultimatelysocial