ಏಕರೂಪದ ಶಿಕ್ಷಣ ಪದ್ಧತಿಯನ್ನು ಕೋರಿ ಸಲ್ಲಿಸಿದ್ದ ಅರ್ಜಿ

ದೇಶದಾದ್ಯಂತ  6 ರಿಂದ 14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಸಾಮಾನ್ಯ ಪಠ್ಯಕ್ರಮವನ್ನು ಹೊಂದಿರುವ ಏಕರೂಪದ ಶಿಕ್ಷಣ ಪದ್ಧತಿಯನ್ನು ಜಾರಿಗೊಳಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು  ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ‘ಶಿಕ್ಷಣ ಪದ್ಧತಿ ಬಗ್ಗೆ ನ್ಯಾಯಾಲಯ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಒಂದು ಶಿಕ್ಷಣ ಮಂಡಳಿಯನ್ನು ಇನ್ನೊಂದಕ್ಕೆ ವಿಲೀನಗೊಳಿಸುವ ಕಾರ್ಯ ನ್ಯಾಯಾಲಯದಲ್ಲ. ಬೇಕಾದರೆ ನೀವು ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಬಹುದು’ ಎಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರು ಅರ್ಜಿದಾರರಾದ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ‌ ಅವರಿಗೆ ಸೂಚಿಸಿದ್ದಾರೆ. ‘ಒಂದು ದೇಶ ಒಂದು ಶಿಕ್ಷಣ ಮಂಡಳಿ’ ಎಂಬ ಪದ್ಧತಿಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಐಸಿಎಸ್‌ಇ ಮತ್ತು ಸಿಬಿಎಸ್‌ಇ ಮಂಡಳಿಯನ್ನು ವಿಲೀನಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

 

Please follow and like us:

Leave a Reply

Your email address will not be published. Required fields are marked *

Next Post

ಜಮ್ಮು ಕಾಶ್ಮೀರದಲ್ಲಿ ಮತ್ತೆ ಭೂಕಂಪ

Fri Jul 17 , 2020
ದೇಶದ ಹಲವೆಡೆ ಮೇಲಿಂದ ಮೇಲೆ ಭೂಕಂಪನ ಸಂಭವಿಸುತ್ತಿದ್ದು, ಇದೀಗ ಜಮ್ಮು ಮತ್ತು ಕಾಶ್ಮೀರದ ಕತ್ರಾ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ 4:55ಕ್ಕೆ ರಿಕ್ಟರ್​ ಮಾಪಕದಲ್ಲಿ 3.9ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.ಗುರುವಾರ ಸಂಜೆ 6.38ರ ಸಮಯದಲ್ಲೂ ಭೂಮಿ ಕಂಪಿಸಿದ ಅನುಭವವಾಗಿತ್ತು ಎಂದು ಭೂಕಂಪನ ಕೇಂದ್ರದ ಮೇಲ್ವಿಚಾರಣಾ ಅಧಿಕಾರಿಗಳು ತಿಳಿಸಿದ್ದಾರೆ.ಜೂನ್​ 27ರಂದು ಭೂಕಂಪನ ಸಂಭವಿಸಿದ್ದು, ರಿಕ್ಟರ್​ ಮಾಪಕದಲ್ಲಿ 4.4ರಷ್ಟು ತೀವ್ರತೆ ದಾಖಲಾಗಿತ್ತು.ಜುಲೈ 16ರಂದು ಅಸ್ಸಾಂ ಮತ್ತು ಮೇಘಾಲಯದಲ್ಲೂ […]

Advertisement

Wordpress Social Share Plugin powered by Ultimatelysocial