ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕವಿತಾಳ್ ಪಟ್ಟಣದ ನಗರದಲ್ಲಿ 3 ನೇ ಹಂತದ ಕಾಮಗಾರಿ ಪ್ರಾರಂಭವಾಗಿ ಒಂದು ವಾರ ಕಳೆದುಹೋಗಿದೆ. ಏಕಾ ಏಕಿಯಾಗಿ ಸ್ಥಳಕ್ಕೆ ತಾಲ್ಲೂಕು ದಂಡಾಧಿಕಾರಿಗಳು ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ್ದಾರೆ. ಇನ್ನೂ ಮಳೆಗಾಲದಲ್ಲಿ ಕಾಮಗಾರಿ ಪ್ರಾರಂಭ ಮಾಡಿರುವುದರಿಂದ, ವಾಸ ಮಾಡಲು ಮನೆ ಇಲ್ಲದಂತಾಗಿದೆ. ಇನ್ನು ವಿದ್ಯುತ್ ಸಂಪರ್ಕವೂ ಇಲ್ಲದೆ ಕತ್ತಲಲ್ಲಿ ಜೀವನ ಮಾಡುವ ದುಸ್ಥಿತಿ ಎದುರಾಗಿದೆ. ಎಂದು ಸಾರ್ವಜನಿಕರು ತಮ್ಮ ಅಳಲನ್ನು ಅವರ ಮುಂದೆ ಹೇಳಿ ಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ದಂಡಾಧಿಕಾರಿಯಾದ ಶ್ರುತಿಯವರು ಸಾರ್ವಜನಿಕರ ಒತ್ತಾಯದ ಮೇರೆಗೆ ಸಾರ್ವಜನಿಕರ ಹಿತ ದೃಷ್ಟಿಯಿಂದ ಕಾಮಗಾರಿಯು ನಡೆಯುತ್ತಿದೆ. ಆದಷ್ಟೂ ಬೇಗ ತ್ವರಿತವಾಗಿ ಕಾಮಗಾರಿಯನ್ನು ಮುಗಿಸಿಕೊಡುವಂತೆ ಸೂಚಿಸಿದ್ದಾರೆ.
ಏಕಾ ಏಕಿಯಾಗಿ ಸ್ಥಳಕ್ಕೆ ಭೇಟಿ ನೀಡಿದ ತಾಲ್ಲೂಕು ದಂಡಾಧಿಕಾರಿ
Please follow and like us: