ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮೀನಾಡಿ ಬಳಿಬೆಳ್ಳಂಬೆಳಗ್ಗೆ ಕಾಡಾನೆ ದಾಳಿ ನಡೆಸಿದ್ದು, ಯುವತಿ ಸೇರಿ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ.
ರಂಜಿತಾ (21) ಹಾಗೂ ರಮೇಶ್ ರೈ (60) ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ.
ರಂಜಿತ ಹಾಲು ಸಹಕಾರ ಸಂಘದ ಸಿಬ್ಬಂದಿಯಾಗಿದ್ದು, ಮನೆಯಿಂದ ಸೊಸೈಟಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಇದೇ ವೇಳೆ ರಮೇಶ್ ರೈ ಮೇಲೂ ಕಾಡಾನೆ ದಾಳಿ ನಡೆಸಿದೆ. ರಮೇಶ್ ರೈ ಸ್ಥಳದಲ್ಲೇ ಮೃತಪಟ್ಟರೆ, ಕಾಡಾನೆ ದಾಳಿಗೆ ಗಾಯಗೊಂಡಿದ್ದ ರಂಜಿತಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada