ಕನ್ನಡಿಗರ ಮನ ಗೆದ್ದ ಹರ್ಭಜನ್

ಹರ್‌ಭಜನ್ ಸಿಂಗ್ ಇತ್ತೀಚೆಗೆ ಖೇಲ್ ರತ್ನ ಪ್ರಶಸ್ತಿಗೆ ತಮ್ಮ ಹೆಸರನ್ನ ಶಿಫಾರಸ್ಸು ಮಾಡಿದ್ದನ್ನ ತಡೆಯುವಂತೆ ಹೇಳಿ ಎಲ್ಲರ ಕೆಂಗೆಣ್ಣಿಗೆ ಗುರಿಯಾಗಿದ್ದರು….ಆದರೆ ಸದ್ಯ ಅವರು ಮಾಡಿರುವ ಟ್ವೀಟ್ ಒಂದು ಕನ್ನಡಿಗರ ಮನ ಗೆದ್ದಿದೆ. ಹೌದು ಸಾಲು ಮರದ ತಿಮ್ಮಕ್ಕ ಅವರ ಫೋಟೋವನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿಕೊಂಡು, ‘ಇವರು ಇಲ್ಲಿಯವರೆಗೂ ೭೩ ಸಾವಿರಕ್ಕೂ ಅಧಿಕ ಸಸಿಗಳನ್ನು ನೆಟ್ಟು ಅವುಗಳನ್ನು ಹೆಮ್ಮರವಾಗಿ ಬೆಳೆಸಿದ್ದಾರೆ. ಇವರ ಬಗ್ಗೆ ಬಹುತೇಕರಿಗೆ ಗೊತ್ತಿಲ್ಲ. ಕೇವಲ ಒಂದೇ ಒಂದು ಸಸಿಯನ್ನಾದರೂ ನಾವು ನೆಡೋಣ. ಧನ್ಯವಾದಗಳು ಅಜ್ಜಿ’ ಎಂದು ಹರ್ಭಜನ್ ಟ್ವಿಟ್ ಮಾಡಿದ್ದಾರೆ. ಹೀಗೆ ಹರ್ಭಜನ್ ತಿಮ್ಮಕ್ಕ ಅವರ ಫೋಟೋ ಹಾಕಿಕೊಳ್ಳುತ್ತಿದ್ದಂತೆ, ಸಾಕಷ್ಟು ಕನ್ನಡಿಗರು ಅವರ ಬಗ್ಗೆ ಟ್ವಿಟ್ ಮಾಡುವ ಮೂಲಕವೇ ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ಪದ್ಮಶ್ರೀ ಪ್ರಶಸ್ತಿ ಪಡೆದ ಹೆಮ್ಮೆಯ ಕನ್ನಡಿಗರು ಎಂದು ಕೆಲವರು ಕಮೆಂಟ್ ಮಾಡಿದರೆ, ನಿಮ್ಮ ಈ ಒಂದು ಟ್ವಿಟ್ನಿಂದ ಕರ್ನಾಟಕದ ತಿಮ್ಮಕ್ಕ ವಿಶ್ವಖ್ಯಾತಿ ಪಡೆದುಕೊಳ್ಳಲಿದ್ದಾರೆ. ಧನ್ಯವಾದಗಳು ಎಂದು ಪ್ರತಿಕ್ರಿಯಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕಲ್ಯಾಣ ಕರ್ನಾಟಕಕ್ಕೆ 650 ಬೆಡ್ ರವಾನೆಗೆ ಡಿಕೆಶಿ ಹಸಿರು ನಿಶಾನೆ

Sun Jul 19 , 2020
ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಸಂದರ್ಭದಲ್ಲಿ ಆಸ್ಪತ್ರೆಗಳು ಮತ್ತಿತರ ಕಡೆ ಸೋಂಕಿತರಿಗೆ ಬೆಡ್ ಗಳ ಕೊರತೆ ಉಂಟಾಗಿದ್ದು, ಅವರ ಪ್ರಾಣಕ್ಕೂ ಸಂಚಾರ ಉಂಟಾಗಿದೆ. ಇಂಥ ಸಂಕಷ್ಟ ಸನ್ನಿವೇಶದಲ್ಲಿ ಅತಿ ಕಡಿಮೆ ವೆಚ್ಚ, ಸುಲಭ ಸಾಗಣೆ, 350 ಕೆಜಿಯಷ್ಟು ಭಾರ ತಡೆಯಬಹುದಾದ ಶೇಕಡಾ 100 ರಷ್ಟು ನವೀಕರಿಸಬಹುದಾದ ಪರಿಸರ ಸ್ನೇಹಿ 650 ಬೆಡ್ ಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೊಡ್ಡಬಳ್ಳಾಪುರದಿಂದ ಕಲ್ಯಾಣ ಕರ್ನಾಟಕಕ್ಕೆ ಸಾಗಣೆ ಮಾಡಲು ಹಸಿರು […]

Advertisement

Wordpress Social Share Plugin powered by Ultimatelysocial