ಕರ್ತವ್ಯ ನಿರತ ವೈದ್ಯರಿಗೆ ಸೂಕ್ತ ಭದ್ರತೆ

ನವದೆಹಲಿ : ಕರ್ತವ್ಯ ನಿರ್ವಹಣೆ ವೇಳೆ ವೈದ್ಯರಿಗೆ ಸೂಕ್ತ ಭದ್ರತೆ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಾರಕ ಕೊರೊನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಗಲಿರುಳು ತಮ್ಮ ಜೀವದ ಹಂಗು ತೊರೆದು ಶ್ರಮಿಸುತ್ತಿದ್ದಾರೆ. ಹೀಗಿದ್ದರೂ ದೇಶದ ವಿವಿಧೆಡೆ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ, ದೌರ್ಜನ್ಯ ಘಟನೆಗಳು ವರದಿಯಾಗುತ್ತಲೇ ಇವೆ. ಹೀಗಾಗಿ ವೈದ್ಯರು ಸಾಂಕೇತಿಕ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಬೆನ್ನಲ್ಲೇ ಇಂದು ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ಹರ್ಷವರ್ಧನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು. ಈ ವೇಳೆ, ಕರ್ತವ್ಯ ನಿರತ ವೈದ್ಯರಿಗೆ ಸೂಕ್ತ ಭದ್ರತೆ ಒದಗಿಸಲಾಗುತ್ತದೆ. ಸರ್ಕಾರ ನಿಮ್ಮ ಜೊತೆಗಿದೆ. ವೈದ್ಯರು ಸಾಂಕೇತಿಕ ಪ್ರತಿಭಟನೆಗೆ ಮುಂದಾಗಬೇಡಿ ಎಂದು ಮನವಿ ಮಾಡಿದರು.

 

 

Please follow and like us:

Leave a Reply

Your email address will not be published. Required fields are marked *

Next Post

ಆರೋಗ್ಯ ಸಿಬ್ಬಂದಿಗಳ ತಂಟೆಗೆ ಬಂದ್ರೇ  ಹುಷಾರ್

Wed Apr 22 , 2020
ಆರೋಗ್ಯ ಸಿಬ್ಬಂದಿಗಳ ತಂಟೆಗೆ ಬಂದ್ರೇ  ಹುಷಾರ್. ಹಲ್ಲೆ, ದೌರ್ಜನ್ಯ ಮಾಡಿದ್ರೆ ಕೈ ಕಾಲ್ ಕಟ್. ಕೊರೊನಾ ವಾರಿಯರ್ಸ್ ತಂಟೆಗೆ ಬರಬೇಡಿ ಎಂದು ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್  ನಡಹಳ್ಳಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಹಲ್ಲೆ ಮಾಡಿದ್ರೆ ಅಂತವರ ಕೈ ಕಾಲು ಮುರಿಯಿರಿ ಎಂದು ಪೊಲೀಸ್ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದ್ದಾರೆ.   Please follow […]

Advertisement

Wordpress Social Share Plugin powered by Ultimatelysocial