ದೇಶಾದ್ಯಾಂತ ಲಾಕ್ ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ಬಸ್ ಸಂಚಾರ, ಜೂನ್ 17ರ ಬುಧವಾರದಿಂದ ಕರ್ನಾಟಕಕ್ಕೆ ಅಂತರರಾಜ್ಯ ಬಸ್ ಸೇವೆಯನ್ನು ಆರಂಭಿಸಲಿದೆ ಎಂದು ಆಂಧ್ರಪ್ರದೇಶ ಸರ್ಕಾರ ಹೇಳಿದೆ. ಮೂರು ಜಿಲ್ಲೆಗಳಿಂದ ಸಂಚಾರ ನಡೆಸುವ ಬಸ್ಗಳಿಗೆ ಪ್ರಯಾಣಿಕರು ಹೇಗೆ ಪ್ರತಿಕ್ರಿಯೆ ನೀಡಲಿದ್ದಾರೆಂದು ತಿಳಿದು ಮೊದಲ ಹಂತದಲ್ಲಿ 168 ಬಸ್ಗಳು ಸಂಚಾರ ನಡೆಸಲಿದ್ದು ಕರ್ನೂಲ್, ಚಿತ್ತೂರು, ಅನಂತಪುರ ಸೇರಿದಂತೆ ಜಿಲ್ಲಾ ಕೇಂದ್ರಗಳಿಂದ ಬಸ್ ಸಂಚಾರ ಆರಂಭವಾಗಲಿದೆ. ಒಟ್ಟು 4 ಹಂತದಲ್ಲಿ 500 ಬಸ್ಗಳ ಸೇವೆಯನ್ನು ಆರಂಭಿಸಲಾಗುತ್ತದೆ ಎಂದು ಎಪಿಎಸ್ಆರ್ಟಿಸಿ ಹೇಳಿದೆ ಹಾಗೆಯೇ ಸೋಮವಾರದಿಂದಲೇ ಆನ್ಲೈನ್ನಲ್ಲಿ ಟಿಕೆಟ್ ಬುಕ್ಕಿಂಗ್ ಪ್ರಾರಂಭವಾಗಿದೆ.