ಕರ್ನಾಟಕಕ್ಕೆ ಅಂತರರಾಜ್ಯ ಬಸ್ ಸೇವೆ ಆರಂಭ

ದೇಶಾದ್ಯಾಂತ ಲಾಕ್ ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ಬಸ್ ಸಂಚಾರ, ಜೂನ್ 17ರ ಬುಧವಾರದಿಂದ ಕರ್ನಾಟಕಕ್ಕೆ ಅಂತರರಾಜ್ಯ ಬಸ್ ಸೇವೆಯನ್ನು ಆರಂಭಿಸಲಿದೆ ಎಂದು ಆಂಧ್ರಪ್ರದೇಶ ಸರ್ಕಾರ ಹೇಳಿದೆ. ಮೂರು ಜಿಲ್ಲೆಗಳಿಂದ ಸಂಚಾರ ನಡೆಸುವ ಬಸ್‌ಗಳಿಗೆ ಪ್ರಯಾಣಿಕರು ಹೇಗೆ ಪ್ರತಿಕ್ರಿಯೆ ನೀಡಲಿದ್ದಾರೆಂದು ತಿಳಿದು ಮೊದಲ ಹಂತದಲ್ಲಿ 168 ಬಸ್‌ಗಳು ಸಂಚಾರ ನಡೆಸಲಿದ್ದು ಕರ್ನೂಲ್, ಚಿತ್ತೂರು, ಅನಂತಪುರ ಸೇರಿದಂತೆ ಜಿಲ್ಲಾ ಕೇಂದ್ರಗಳಿಂದ ಬಸ್ ಸಂಚಾರ ಆರಂಭವಾಗಲಿದೆ. ಒಟ್ಟು 4 ಹಂತದಲ್ಲಿ 500 ಬಸ್‌ಗಳ ಸೇವೆಯನ್ನು ಆರಂಭಿಸಲಾಗುತ್ತದೆ ಎಂದು ಎಪಿಎಸ್‌ಆರ್‌ಟಿಸಿ ಹೇಳಿದೆ ಹಾಗೆಯೇ ಸೋಮವಾರದಿಂದಲೇ ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ಕಿಂಗ್ ಪ್ರಾರಂಭವಾಗಿದೆ.

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಮೃತದೇಹಗಳನ್ನು ಸಂಬಂಧಿತರಿಗೆ ಹಸ್ತಾಂತರಿಸಿ

Mon Jun 15 , 2020
ದೆಹಲಿಯಲ್ಲಿ ಕೋವಿಡ್-19 ವೈರಸ್ ಸೋಂಕಿನ ಭೀತಿ ದಿನದಿಂದ ದಿನಕ್ಕೆಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಅಮಿತ್ ಶಾ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ. ಈ ಹಿಂದೆ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಶಂಕೆ ಇರುವ ವ್ಯಕ್ತಿಗಳ ಮೃತದೇಹಗಳನ್ನು ಪರೀಕ್ಷೆ ಮುಗಿದು ಫಲಿತಾಂಶ ಬರುವವರೆಗೂ ಆಸ್ಪತ್ರೆಗಳು ಸಂಬಂಧಿಗಳಿಗೆ ಹಸ್ತಾಂತರಿಸುತ್ತಿರಲಿಲ್ಲ. ಆದರೆ ಅಮಿತ್ ಶಾ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ […]

Advertisement

Wordpress Social Share Plugin powered by Ultimatelysocial