ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಕಲಬುರ್ಗಿಯಲ್ಲಿ ನಗರ ಪ್ರದಕ್ಷಿಣೆ ಮಾಡಿದ ನಂತರ ಮಾತನಾಡಿದ ಅವರು ಕಲಬುರ್ಗಿ ನಗರಕ್ಕೆ 24×7 ಕುಡಿಯುವ ನೀರಿನ ಕಾಮಗಾರಿಗೆ ಶೀಘ್ರವೇ ಶಂಕುಸ್ಥಾಪನೆ ಆಗಲಿದೆ. 837 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಜಾರಿಯಾಗಿದ್ದು, ಜಲ ಶುದ್ಧೀಕರಣ ಘಟಕದಲ್ಲಿ ಹೊಸ ಯಂತ್ರೋಪಕರಣ ಅಳವಡಿಕೆ ಮಾಡಲಾಗುತ್ತದೆ.ಎಸ್.ಟಿ.ಪಿ ಪ್ಲಾಂಟ್ ನೀರು ನೇರವಾಗಿ ಭೀಮಾ ನದಿಗೆ ಬಿಡುವುದು ಅಪರಾಧ ಪ್ಲಾಂಟ್ಗೆ ಭೂಮಿ ಪಡೆದುಕೊಂಡ ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ,ಉದ್ಯಾನವನಗಳ ಅಭಿವೃದ್ಧಿಗೆ ಮತ್ತು ಅಪ್ಪನ ಕೆರೆ ತುಂಬಿಸಲು ಬಳಕೆ ಮಾಡಿಕೊಳ್ಳಲಾಗುವುದು. ಸಚಿವನಾಗಿ ಏನೆಲ್ಲ ಕಾಮಗಾರಿಗಳಿವೆಯೋ ಅವೆಲ್ಲಕ್ಕೂ ವೇಗ ನೀಡಲಿದ್ದೇನೆ. ನಗರಾಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಗೊಳಿಸೋ ಲೇಔಟ್ ಗಳಲ್ಲಿ ಶೇ 5 ರಷ್ಟು ನಿವೇಶನ ಪತ್ರಕರ್ತರಿಗೆ ಮೀಸಲಿಡಲಾಗುವುದು ಎಂದು ಹೇಳಿದರು.