ಕಾಂಗ್ರೆಸ್ ವಿರುದ್ಧ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ತಿರುಗೇಟು

ಕಾಂಗ್ರೆಸ್ ನವರು ಸರ್ಕಾರದ ವಿರುದ್ಧ ಸುಳ್ಳು ಸುಳ್ಳು ಆರೋಪಗಳನ್ನು ಮಾಡಿ ಜನರಿಗೆ ದಾರಿ ತಪ್ಪಿಸುವ ಕೆಲಸ  ಮಾಡುತ್ತಿದ್ದಾರೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ತಿರುಗೇಟು ನೀಡಿದ್ದಾರೆ. ನಗರದಲ್ಲಿ ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆಗಳ ಕುರಿತು ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು, ಅವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಹೀಗಾಗಿ ಸರ್ಕಾರದ ವಿರುದ್ಧ ಕೋವಿಡ್-19 ಚಿಕಿತ್ಸೆಯಲ್ಲಿ ಗೋಲ್​ಮಾಲ್ ನಡೆದಿದೆ ಎಂಬ ಆರೋಪಕ್ಕೆ ಸಚಿವ ಪ್ರಭು ಚವ್ಹಾಣ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಸುಳ್ಳು ಮಾಹಿತಿ ಎಲ್ಲಿಂದ ಕಲೆಕ್ಟ್ ಮಾಡ್ತಾರೋ ಗೊತ್ತಿಲ್ಲ ಅವರ ಹೇಳಿಕೆಯಲ್ಲಿ ಯಾವುದೇ ಸತ್ಯವಿಲ್ಲ. ಕಾಂಗ್ರೆಸ್​​ನವರು ಮಾಡಿದ ಆರೋಪಕ್ಕೆ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ. ಸುಧಾಕರ್ ಬಹಿರಂಗವಾಗಿಯೇ ಲೆಕ್ಕ ಕೊಟ್ಟಿದ್ದಾರೆ. ಈ ವೇಳೆಯಲ್ಲಿ ಪರಿಷತ್ ಸದಸ್ಯ ರಘುನಾಥ್ ರಾವ್ ಮಲ್ಕಾಪೂರೆ, ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ, ಮುಖಂಡರಾದ ಈಶ್ವರಸಿಂಗ್ ಠಾಕೂರ್, ಅಶೋಕ ಹೊಕ್ರಾಣೆ, ಅರಿಹಂತ ಸಾವಳೆ ಹಾಗೂ ಬಸವರಾಜ ಜೋಜನಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ರಾಜಸ್ಥಾನದಲ್ಲಿ ಮುಗಿಯದ ರಾಜಕೀಯ ತಿಕ್ಕಾಟ

Sun Jul 26 , 2020
ರಾಜಸ್ಥಾನ ರಾಜಕೀಯ ತಿಕ್ಕಾಟ ಮುಗಿದಂತೆ ಕಾಣುತ್ತಿಲ್ಲ . ಜೊತೆಗೆ ಸಚಿನ್ ಪೈಲೆಟ್ ಸೇರಿ ೧೮ ಶಾಸಕರ ಅನರ್ಹತೆಯ ಕುರಿತು ಇನ್ನು ವಿಚಾರಣೆ ನಡೆಯುತ್ತಿದೆ.ಇದರ ನಡುವೆ ಕಾಂಗ್ರೆಸ್ ಹಾಗು ಬಿಜೆಪಿ ಪಕ್ಷಗಳ ನಡುವೆ ತಿಕ್ಕಾಟ ಜೋರಾಗಿದ್ದು ಮುಖ್ಯಮಂತ್ರಿ ಗೆಹ್ಲೋಟ್ ಅವರು ಬಿಜೆಪಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನ ರಾಜಭವನದ ಮುಂದೆಯೇ ಶನಿವಾರ ಧರಣಿ ಕೂತಿದ್ದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇದೀಗ, ಅನಿವಾರ್ಯತೆ ಸೃಷ್ಟಿಯಾದರೆ ಕಾಂಗ್ರೆಸ್ ಶಾಸಕರು ರಾಷ್ಟ್ರಪತಿಗಳನ್ನು ಭೇಟಿಯಾಗುತ್ತೇವೆ. ಅಗತ್ಯಬಿದ್ದರೆ […]

Advertisement

Wordpress Social Share Plugin powered by Ultimatelysocial