ಕಾಡುಸಿದ್ದೇಶ್ವರ ಮಠಕ್ಕೆ ಡಿಕೆಶಿ ಭೇಟಿ

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ಕಾಡಸಿದ್ದೇಶ್ವರ ಮಠಕ್ಕೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿದ್ದು, ಕಾಡಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಡಾ.ಶ್ರೀಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಸ್ವಾಮೀಜಿಯವರನ್ನು ಭೇಟಿ ಮಾಡಿ ಅವರ, ಆಶೀರ್ವಾದ ಪಡೆದುಕೊಂಡರು. ಕೆಪಿಸಿಸಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಶ್ರೀಮಠಕ್ಕೆ ಭೇಟಿ ನೀಡಿದ ಅವರು ಪಕ್ಷದ ಸಂಘಟನೆ ಮತ್ತು ಪಕ್ಷವನ್ನು ಹೇಗೆ ಅಧಿಕಾರಕ್ಕೆ ತರಬೇಕೆಂಬುದರ ಬಗ್ಗೆ ಶ್ರೀಗಳಿಂದ ಸಲಹೆ, ಮಾರ್ಗದರ್ಶನ ಪಡೆದುಕೊಂಡರು.

 

Please follow and like us:

Leave a Reply

Your email address will not be published. Required fields are marked *

Next Post

ಗುರುದ್ವಾರದ ಪ್ರಸಾದ ಸೇವಿಸಿ 10 ಜನರು ಅಸ್ವಸ್ಥ

Sun Jul 5 , 2020
ಜನರು ಅಸ್ವಸ್ಥ ಪಂಜಾಬ್‌ನ ತಾರ್ನ್ ತರಣ್‌ನ ಗುರುದ್ವಾರದಲ್ಲಿ ಪ್ರಸಾದ ಸೇವಿಸಿದ ನಂತರ ಕನಿಷ್ಠ 10 ಜನ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಅಮೃತಸರ ಮೂಲದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗಷ್ಟೆ ನಿಧನರಾದ ತಾಯಿಗಾಗಿ ರಘುವೀರ್ ಸಿಂಗ್ ಎನ್ನುವವರು ಆಯೋಜಿಸಿದ್ದ ಸುಖಮಣಿ ಸಾಹಿಬ್ ಪ್ರವಚನದಲ್ಲಿ ಈ ಘಟನೆ ನಡೆದಿದೆ. ಅವರ ಮನೆಯಲ್ಲಿ ಪ್ರಾರ್ಥನಾ ಪ್ರವಚನವನ್ನು ಆಯೋಜಿಸಲಾಗಿತ್ತು. ಪ್ರಾರ್ಥನೆಯ ಪ್ರವಚನದ ನಂತರ ರಘುವೀರ್ ಸಿಂಗ್ […]

Advertisement

Wordpress Social Share Plugin powered by Ultimatelysocial