ಕಾನೂನಿಗಿಂತ ಯಾರು ದೊಡ್ಡವರಲ್ಲ;ಲಖೀಂಪುರ್ ಖೇರಿ ಘಟನೆಯ ತನಿಖೆಗೆ ಯಾರು ಅಡ್ಡಿಪಡಿಸುವುದಿಲ್ಲ; ಜೆ.ಪಿ.ನಡ್ಡಾ ಸ್ಪಷ್ಟನೆ

ಕಾನೂನಿಗಿಂತ ಯಾರು ದೊಡ್ಡವರಿಲ್ಲ, ಲಖೀಂಪುರ್ ಖೇರಿ ಘಟನೆಯ ತನಿಖೆಗೆ ಯಾರು ಅಡ್ಡಿಪಡಿಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಎಂಟು ಮಂದಿಯನ್ನು ಬಲಿಪಡೆದುಕೊಂಡ ಲಖೀಂಪುರ್ ಖೇರಿ ಘಟನೆ ಕುರಿತಂತೆ ಬಿಜೆಪಿ ನಾಯಕರು ಜಾಣ ಮೌನಕ್ಕೆ ಶರಣಾಗಿದ್ದರು.ಬಿಜೆಪಿ ನಾಯಕರ ಧೋರಣೆ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ರಾಹುಲ್ಗಾಂಧಿ, ಪ್ರಿಯಾಂಕಾ ಗಾಂಧಿ, ಕಪಿಲ್ ಸಿಬಲ್ ಸೇರಿದಂತೆ ಹಲವಾರು ನಾಯಕರು ಬಿಜೆಪಿ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದ್ದರು. ಈ ಬೆಳವಣಿಗೆ ನಂತರ ಪ್ರತಿಕ್ರಿಯೆ ನೀಡಿದ ಜೆ.ಪಿ ನಡ್ಡಾ  ಅವರು ಲಖೀಂಪುರ ಖೇರಿ ಘಟನೆಯ ತನಿಖೆಯಲ್ಲಿ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಘಟನೆ ಕುರಿತಂತೆ ಉತ್ತರ ಪ್ರದೇಶ ಸರ್ಕಾರ ಈಗಾಗಲೇ ಆಯೋಗ ರಚನೆ ಮಾಡಿದೆ. ಕಾನೂನಿಗಿಂತ ಯಾರು ದೊಡ್ಡವರಲ್ಲ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ ಎಂದು ನಡ್ಡಾ ಹೇಳಿದ್ದಾರೆ

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಈಗ ಎಲ್ಲಾ ವರ್ಗದವರ ಪಕ್ಷ; ಸಿಎಂ ಬಸವರಾಜ್‌ ಬೊಮ್ಮಾಯಿ

Sat Oct 9 , 2021
ಉತ್ತಮ ಆಡಳಿತ ನೀಡಿ ಮತ್ತೊಮ್ಮೆ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವುದೇ ನನ್ನ ಗುರಿ  ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ‌ ಭಾರತೀಯ ಜನತಾಪಕ್ಷ ಈಗ ಕರ್ನಾಟಕದಲ್ಲಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅದು ಸಮಾಜದ ಎಲ್ಲ ವರ್ಗದವರಿಗೂ ತಲುಪಿ ಅವರ ಬೆಂಬಲವನ್ನು ಗಳಿಸಿರುವ ಪಕ್ಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನವದೆಹಲಿಯಲ್ಲಿ ನಡೆದ ಇಂಡಿಯಾ ಟು ಡೇ ಕಾನ್ಕಲೇವ್ ನಲ್ಲಿ  ಮಾತನಾಡಿದ  ಸಿಎಂ ಬೊಮ್ಮಾಯಿ ಅವರು  ಉತ್ತರ ಕರ್ನಾಟಕ ಭಾಗದಿಂದ ಹಲವಾರು […]

Advertisement

Wordpress Social Share Plugin powered by Ultimatelysocial