ಕಾರವಾರ ತಾಲ್ಲೂಕಿನಲ್ಲಿ ಗುಡುಗು ಸಹಿತ ಧಾರಕಾರ ಮಳೆ

ಕಾರವಾರ ತಾಲ್ಲೂಕಿನ ವಿವಿಧೆಡೆ ಇಂದು ಬೆಳಿಗ್ಗೆಯಿಂದ ಗುಡುಗು ಸಹಿತ ಧಾರಕಾರ ಮಳೆ ಬರುತ್ತಿದ್ದು.ನಿನ್ನೆ ಸಂಜೆಯೂ ನಗರದಲ್ಲಿ ಉತ್ತಮ ಮಳೆಯಾಗಿದೆ.ಉತ್ತರ ಕನ್ನಡದ ಭಾಗದಲ್ಲಿ ಭತ್ತದ ವ್ಯವಸಾಯ ಮಾಡುವವರು ಹೊಲಗಳನ್ನು ಉಳುಮೆ ಬಿತ್ತನೆಗೆ ಸಿದ್ಧತೆ ಆರಂಭಿಸಿದ್ದಾರೆ. ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಆರಂಭವಾಗಿದೆ. ಉತ್ತಮವಾಗಿ ಮಳೆ ಬೀಳಲಿದೆ ಎಂದು ಸಂತಸದಿಂದ ರೈತರು ಅಭಿಪ್ರಾಯಪಟ್ಟಿದ್ದಾರೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮಂಗಳವಾರದಂದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.ಹಾಗೂ ಮೀನುಗಾರರಿಗೆ ಸಮುದ್ರದ ಕಡೆ ಹೊಗಬಾರದು ಎಂದು ಎಚ್ಚರಿಕೆ ನೀಡಿದೆ.

 

 

Please follow and like us:

Leave a Reply

Your email address will not be published. Required fields are marked *

Next Post

  ಸೋಂಕಿತರ ಸಂಖ್ಯೆ೧.೯೮ ಲಕ್ಷಕ್ಕೆ ಏರಿಕೆ

Tue Jun 2 , 2020
ದೇಶದಲ್ಲಿ ಲಾಕ್​ಡೌನ್​ ಸಡಿಲಿಕೆ ಬಳಿಕ ಕೊರೊನಾ ರ‍್ಭಟ ಹೆಚ್ಚಾಗಿದೆ ಕೊರೊನಾ ವೈರಸ್ ಮಹಾಮಾರಿ ದೇಶದಲ್ಲಿ ಕಳೆದ ೨೪ ಗಂಟೆಯಲ್ಲಿ ೮೧೭೧ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ . ಇದರಿಂದ.ಭಾರತದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ ೧,೯೮,೭೦೬ಕ್ಕೆ ಏರಿಕೆಯಾಗಿದೆ. ಹಾಗೂ ಗುಣಮುಖರಾಗುವವ ಪ್ರಮಾಣ ಶೇ.೪೮ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ೩,೭೦೭ ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚರ‍್ಜ್ ಆಗಿದ್ದಾರೆ.೨೦೪ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ, ಇದುವರೆಗೂ ದೇಶದಲ್ಲಿ ಕೊರೊನಾಗೆ ಒಟ್ಟಾರೆ ಬಲಿಯಾದವರ ಸಂಖ್ಯೆ ೫೫೯೮ಕ್ಕೆ ಏರಿಕೆಯಾಗಿದೆ. ಎಂದು […]

Advertisement

Wordpress Social Share Plugin powered by Ultimatelysocial