ಕಾರವಾರ ತಾಲ್ಲೂಕಿನ ವಿವಿಧೆಡೆ ಇಂದು ಬೆಳಿಗ್ಗೆಯಿಂದ ಗುಡುಗು ಸಹಿತ ಧಾರಕಾರ ಮಳೆ ಬರುತ್ತಿದ್ದು.ನಿನ್ನೆ ಸಂಜೆಯೂ ನಗರದಲ್ಲಿ ಉತ್ತಮ ಮಳೆಯಾಗಿದೆ.ಉತ್ತರ ಕನ್ನಡದ ಭಾಗದಲ್ಲಿ ಭತ್ತದ ವ್ಯವಸಾಯ ಮಾಡುವವರು ಹೊಲಗಳನ್ನು ಉಳುಮೆ ಬಿತ್ತನೆಗೆ ಸಿದ್ಧತೆ ಆರಂಭಿಸಿದ್ದಾರೆ. ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಆರಂಭವಾಗಿದೆ. ಉತ್ತಮವಾಗಿ ಮಳೆ ಬೀಳಲಿದೆ ಎಂದು ಸಂತಸದಿಂದ ರೈತರು ಅಭಿಪ್ರಾಯಪಟ್ಟಿದ್ದಾರೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮಂಗಳವಾರದಂದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.ಹಾಗೂ ಮೀನುಗಾರರಿಗೆ ಸಮುದ್ರದ ಕಡೆ ಹೊಗಬಾರದು ಎಂದು ಎಚ್ಚರಿಕೆ ನೀಡಿದೆ.