ಸಂಬಂಧಿಕರ ಮದುವೆಗೆ ಕಾರಿನಲ್ಲಿ ತೆರಳುತ್ತಿದ್ದ ನವದಂಪತಿ ವಿಧಿಯಾಟಕ್ಕೆ ಸಿಲುಕಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹುಳಿಯಾರು ಗೇಟ್ನಲ್ಲಿ ನಡೆದಿದೆ.
ತಾಲ್ಲೂಕಿನ ತಿಗಳನಹಳ್ಳಿಯ ಅನುಷಾ (೨೮) ಹಾಗೂ ಅರಸೀಕೆರೆ ಮೂಲದ ರಘು (೩೨) ಎಂಬುವರೇ ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿ ನವದಂಪತಿಗಳು.ಕಳೆದ ಎರಡುತಿಂಗಳ ಹಿಂದೆಯಷ್ಟೆ ಈ ದಂಪತಿಗಳ ಮದುವೆಯಾಗಿತ್ತು. ಇವರಿಬ್ಬರು ಸಾಫ್ಟ್ವೇರ್ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.ಅನುಷಾ ತಮ್ಮ ತವರು ಮನೆಯಿಂದ ಪತಿಯೊಂದಿಗೆ ಬಳ್ಳಾರಿಯಲ್ಲಿ ನಡೆಯುತ್ತಿದ್ದ ಸಂಬಂಧಿಕರ ಮದುವೆಗೆ ತೆರಳುತ್ತಿದ್ದರು. ಚಿಕ್ಕನಾಯಕನಹಳ್ಳಿಯ ಹುಳಿಯಾರು ಗೇಟ್ನಲ್ಲಿ ಹುಳಿಯಾರು ಕಡೆಯಿಂದ ವೇಗವಾಗಿ ಬಂದ ಲಾರಿ ಕಾರಿಗೆ ಮುಖಾಮುಖಿಯಾಗಿ ಅಪ್ಪಳಿಸಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಚಾಲಕ ಭರತ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಅಪಘಾತದಲ್ಲಿ ಮೃತಪಟ್ಟಿರುವ ನವದಂಪತಿಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಭಗವಂತನಲ್ಲಿ ಪ್ರಾರ್ಥಿಸಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada