ಲಾಕ್ಡೌನ್ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಕೆಲಸ ಇಲ್ಲ. ಕೆಲವು ಕಾರ್ಮಿಕರು ಊರುಗಳಿಗೆ ತೆರಳಲಾಗದೇ ಇದ್ದಲ್ಲಿಯೇ ಉಳಿದುಕೊಂಡಿದ್ದಾರೆ ಅಂತವರಿಗೆ ಮನೆ ಮಾಲೀಕರು ರೆಂಟ್ ಕೇಳುವಂತಿಲ್ಲ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿನಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಂದ ಒಂದು ತಿಂಗಳು ಬಾಡಿಗೆ ವಸೂಲು ಮಾಡಬಾರದು. ‘ಜಿಲ್ಲಾ ಮ್ಯಾಜಿಸ್ಟ್ರೇಟ್ಗಳು ಈ ವಿಷಯದ ಬಗ್ಗೆ ಜಾಗೃತಿ ಅಭಿಯಾನವನ್ನು ಕೈಗೊಳ್ಳಬೇಕು, ವಿಶೇಷವಾಗಿ ಕಾರ್ಮಿಕರು, ವಲಸೆ ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಪ್ರದೇಶಗಳಲ್ಲಿ ಈ ಬಗ್ಗೆ ಸೂಚನೆ ನೀಡಬೇಕು. ಒಂದು ವೇಳೆ ಯಾರಿಗಾದರೂ ಬಾಡಿಗೆ ನೀಡುವಂತೆ ಒತ್ತಾಯ ಮಾಡುತ್ತಿದ್ದರೆ ಅಂಥವರು ಪೊಲೀಸ್ ನಿಯಂತ್ರಣ ಕೊಠಡಿಯ 100 ಸಂಖ್ಯೆಗೆ ಕರೆ ಮಾಡಬಹುದು. ಇಂಥ ಸಂದರ್ಭಗಳಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು’ ಎಂದು ಹೇಳಿದರು.