ಕಾರ್ಮಿಕರ ಪರ ಗುಡುಗಿದ ಸಿದ್ದರಾಮಯ್ಯ

ಸ್ವಂತ ಊರುಗಳಿಗೆ ಹೋಗುವ ಕಾರ್ಮಿಕರಿಗೆ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಉದ್ಯೋಗ ಕಾರ್ಡ್ ಒದಗಿಸಿ ಕೆಲಸ ನೀಡಬೇಕು ಎಂದು ಮಾಜಿ ಸಿಎಂ, ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.  ಈ ಕುರಿತು ಟ್ವೀಟ್ ಮಾಡಿರುವ ಅವರು, ಇನ್ನಾದರೂ ರಾಜ್ಯ ಸರ್ಕಾರ ಬೆಂಗಳೂರಿನಿಂದ ಬೇರೆ ಜಿಲ್ಲೆಗಳಿಗೆ, ಬೇರೆ ಜಿಲ್ಲೆಗಳಿಂದ ಬೆಂಗಳೂರಿಗೆ ಬರುವ ಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಹೋಗುವವರು, ಬರುವವರಿಗೆ ಕಡ್ಡಾಯ ಆರೋಗ್ಯ ತಪಾಸಣೆ ಮಾಡಿಸಿ, ಅಗತ್ಯವೆನಿಸಿದರೆ ಕ್ವಾರಂಟೈನ್‍ಗೆ ಒಳಪಡಿಸಿ. ಸ್ವಂತ ಊರುಗಳಿಗೆ ಹೋಗುವ ಕಾರ್ಮಿಕರಿಗೆ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಉದ್ಯೋಗ ಕಾರ್ಡ್ ಒದಗಿಸಿ ಕೆಲಸ ನೀಡಬೇಕು. ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಉದ್ಯೋಗ ಎಂಬ ನಿಯಮ ಸಡಿಲಿಸಬೇಕು. ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ 45 ದಿನಗಳಿಂದ ಸಂಬಳ ಕೊಟ್ಟಿಲ್ಲ. ಕೂಡಲೇ ಅವರಿಗೆ ಭತ್ಯೆಯನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಬಾಕಿ ಇರುವ ಸಿಬಿಎಸ್‌ಇ ಪರೀಕ್ಷೆ ರದ್ದು

Wed May 6 , 2020
ಲಾಕ್‌ಡೌನ್ ಹಿನ್ನಲೆ ಮುಂದೂಡಿದ್ದ ಸಿಬಿಎಸ್‌ಇ ೧೦ನೇ ತರಗತಿಯ ಬಾಕಿ ವಿಷಯಗಳ ಪರೀಕ್ಷೆಗಳನ್ನು ಕ್ಯಾನ್ಸಲ್ ಮಾಡಲಾಗಿದೆ. ಈಶಾನ್ಯ ದೆಹಲಿ ಹೊರತುಪಡಿಸಿ ಇತರೆ ಯಾವುದೇ ರಾಜ್ಯದಲ್ಲಿ ಸಿಬಿಎಸ್‌ಇ ೧೦ನೇ ತರಗತಿಯ ಉಳಿದ ವಿಷಯಗಳ ಪರೀಕ್ಷೆಗಳನ್ನು ನಡೆಸುವುದಿಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ರಮೇಶ್ ಪೋಖ್ರಿವಾಲ್ ನಿಶಾಂಕ್ ಮಾಹಿತಿ ನೀಡಿದ್ದಾರೆ. ದೇಶಾದ್ಯಂತ ಈಗಾಗಲೇ ಸಿಬಿಎಸ್‌ಇ ೧೦ನೇ ತರಗತಿ ಪ್ರಮುಖ ಪತ್ರಿಕೆಗಳ ಪರೀಕ್ಷೆ ಪೂರ್ಣಗೊಂಡಿದೆ. ಬಾಕಿಯಿರುವ ಒಂದೆರಡು ವಿಷಯಗಳ ಪರೀಕ್ಷೆಗಳನ್ನು ನಡೆಸುವುದಿಲ್ಲ. ಆದ್ರೆ […]

Advertisement

Wordpress Social Share Plugin powered by Ultimatelysocial