ಕಾಲುವೆ ಕಾಂಕ್ರೀಟ್ ಕಾಮಗಾರಿ ಕಳಪೆ

ದೇವದುರ್ಗ ತಾಲೂಕಿನ ಜೀವನಾಡಿಯಾದ ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆ (ಎನ್.ಆರ್.ಬಿ.ಸಿ) ಆಧುನೀಕರಣ ಕಾಮಗಾರಿ ಬರದಿಂದ ಸಾಗಿದೆ. ಆದರೆ ಕಾಮಗಾರಿಯ ಗುಣಮಟ್ಟದ ಬಗ್ಗೆ ಹಲವಾರು ಅನುಮಾನ ಮೂಡುವಂತಾಗಿದೆ. ಯಾವುದೇ ಇಲಾಖೆಯ ನಿರ್ವಹಣೆಯಲ್ಲಿ ಕಾಮಗಾರಿ ನಡೆದರೆ ಅಧಿಕಾರಿಗಳು ಹಾಜರಿದ್ದು, ಗುಣಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಳ್ಳುತ್ತಾರೆ. ಆದರೆ ಒಂದು ಸಾವಿರ ಕೋಟಿ ವೆಚ್ಚದ ಕಾಮಗಾರಿ ನಡೆದಿದ್ದರೂ ಅಧಿಕಾರಿಗಳು ಈ ಕಡೆ ಸುಳಿಯುತ್ತಿಲ್ಲ. ಅನೇಕ ಬಾರಿ ಮುಖ್ಯ ಕಾಲುವೆ ಹೊಡೆದು ಸಾವಿರಾರು ಎಕೆರೆ ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ಇಂತಹ ಸ್ಥಿತಿಯಲ್ಲಿ ಕಾಲುವೆಯ ಆಧುನಿಕರಣ ಮಾಡುವಂತೆ ಅನೇಕ ಬಾರಿ ವಿವಿಧ ಸಂಘಟನೆಗಳ ಹೋರಾಟ ಫಲವಾಗಿ ಪ್ರಸ್ತಕ ವರ್ಷ ಕಾಲುವೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಬ್ಲಾಕ್ ವರ್ಕ್ ಇರುವ ಕಡೆ ಕಳಪೆ ಗುಣಮಟ್ಟದ ಕಬ್ಬಿಣದ ಕಂಬಿಗಳನ್ನು ಬಳಸಿ ಸಿಮೆಂಟ್ ಕಾಂಕ್ರೀಟ್ ಮಾಡಲಾಗುತ್ತಿದೆ ಎನ್ನುವ ಆರೋಪವು ಶುರುವಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್..?

Sun Jun 14 , 2020
ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿಕೆ. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಕೊರೊನಾ ಭೀತಿ ಹೆಚ್ಚಳವಾಗುತ್ತಿದ್ದು, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಮಾತನಾಡಲಿದ್ದಾರೆ. ಮಹಾರಾಷ್ಟ್ರ ಹಾಗೂ ವಿದೇಶದಿಂದ ಬಂದವರನ್ನು ಮಾತ್ರ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತಿದೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಯಾವುವೇ ಅವ್ಯವಸ್ಥೆ ಇಲ್ಲ. ಸರ್ಕಾರದ ಮಾರ್ಗಸೂಚಿಯಂತೆ ವ್ಯವಸ್ಥೆ ಮಾಡಲಾಗಿದೆ. […]

Advertisement

Wordpress Social Share Plugin powered by Ultimatelysocial