ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನಲೆ ನಾಗರ ಪಂಚಮಿ ಹಬ್ಬಕ್ಕೂ ಕೊರೊನಾ ಎಫೆಕ್ಟ್ ತಡ್ಡಿದ್ದು ಸಾರ್ವಜನಿಕವಾಗಿ ಹಬ್ಬ ಆಚರಣೆಗೆ ಸಂಪೂರ್ಣ ನಿರ್ಭಂಭ ಹೇರಲಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನಾಗರಪಂಚಮಿ ದಿನವೇ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದಾಗಿದೆ. ಪ್ರತೀ ವರ್ಷ ನಾಗರಪಂಚಮಿ ಹಿನ್ನಲೆ ಲಕ್ಷಾಂತರ ಭಕ್ತರಿಂದ ಪೂಜೆ ಸಲ್ಲಿಕೆಯಾಗುತ್ತಿತ್ತು. ಈ ಬಾರಿ ಅರ್ಚಕರಿಂದ ಮಾತ್ರ ಧಾಮಿಕ ವಿಧಿ ವಿಧಾನಗಳು ನಡೆಯಲಿವೆ. ಭಕ್ತರ ಪರವಾಗಿ ಅರ್ಚಕರೇ ಸಂಪ್ರದಾಯದ0ತೆ ಪೂಜೆ ನಡೆಸಲಿದ್ದಾರೆ. ಅವರವರ ಮನೆಯ ನಾಗನಕಟ್ಟೆಯಲ್ಲಿ ಹಬ್ಬ ಆಚರಿಸುವಂತೆ ಸೂಚನೆ ನೀಡಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಕಳೆದ 2 ವರ್ಷಗಳಲ್ಲಿ ಓಟಿಟಿ ಬಗ್ಗೆ ಸಾಕಷ್ಟು ಚರ್ಚೆ

Fri Jul 24 , 2020
ಕಳೆದ ಒಂದೆರೆಡು ವರ್ಷಗಳಲ್ಲಿ ಓಟಿಟಿ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಅದರಲ್ಲೂ ಲಾಕ್‌ಡೌನ್ ಸಂದರ್ಭದಲ್ಲಿ ಓಟಿಟಿಯ ಪ್ರಾಮುಖ್ಯತೆ ಇನ್ನಷ್ಟು ಹೆಚ್ಚಾಗಿದ್ದು, ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ಪುನಃ ಪ್ರಾರಂಭವಾಗುವವರೆಗೂ, ಓಟಿಟಿಯ ಮಹತ್ವ ಇನ್ನಷ್ಟು ಹೆಚ್ಚಾಗಿದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಓಟಿಟಿಯಲ್ಲೂ ಬರೀ ಕನ್ನಡ ಚಿತ್ರಗಳೇ ಸಿಗುವುದಿಲ್ಲ. ಬೇರೆ ಭಾಷೆಯ ಚಿತ್ರಗಳ ಜತೆಗೆ ಕನ್ನಡ ಚಿತ್ರಗಳೂ ಸಿಗುತ್ತವೆ. ಹೀಗಿರುವಾಗ, ತಂಡವೊ0ದು ಬರೀ ಕನ್ನಡ ಚಿತ್ರಗಳಿಗಾಗಿಯೇ ಓನ್ಲಿ ಕನ್ನಡ ಎಂಬ ಹೊಸ ಓಟಿಟಿ ಶುರು […]

Advertisement

Wordpress Social Share Plugin powered by Ultimatelysocial