ಕುಮಾರಸ್ವಾಮಿ ಇತ್ತೀಚಿಗೆ ಸಾಕಷ್ಟು ಅಧ್ಯಾಯನ ಮಾಡುತ್ತಿದ್ದಾರೆ;ವಿ.ಸೋಮಣ್ಣ

ಕಲಬುರ್ಗಿ: ಕುಮಾರಸ್ವಾಮಿ ಅವರು ಆರ್ಎಸ್ಎಸ್ಬಗ್ಗೆ ಟೀಕಿಸಿರುವುದನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅವರು ಇತ್ತೀಚೆಗೆ ಸಾಕಷ್ಟು ಅಧ್ಯಯನ ಮಾಡುತ್ತಿದ್ದಾರೆ. ಬಹುಶಃ ತಮ್ಮ ವಿದ್ಯಾರ್ಥಿ ದಿನಗಳಲ್ಲೂ ಇಷ್ಟೊಂದು ಓದಿರಲಿಕ್ಕಿಲ್ಲಎಂದು ವಸತಿ ಸಚಿವ ವಿ. ಸೋಮಣ್ಣ ಟೀಕಿಸಿದ್ದಾರೆ. ವಿಮಾನ ನಿಲ್ದಾಣದಿಂದ ಸಿಂದಗಿಗೆ ತೆರಳುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನದಲ್ಲಿ ಬರುವಾಗಲೂ ಅವರೊಂದಿಗೆ ಮಾತನಾಡಿದೆ. ನಾನು ಚಿಕ್ಕ ವಯಸ್ಸಿನಲ್ಲಿಯೇ ಆರ್ಎಸ್ಎಸ್ನೊಂದಿಗೆ ನಂಟು ಹೊಂದಿದ್ದೆ. ಅದು ರಾಷ್ಟ್ರನಿರ್ಮಾಣ ಹಾಗೂ ವ್ಯಕ್ತಿತ್ವವನ್ನು ಬೆಳೆಸುವಲ್ಲಿ ನಿರತವಾಗಿದೆಯೇ ಹೊರತು ಕುಮಾರಸ್ವಾಮಿ ಅವರು ಹೇಳಿದಂತೆ ಜನರನ್ನು ಧರ್ಮದ ಆಧಾರದ ಮೇಲೆ ಒಡೆಯುತ್ತಿಲ್ಲ ಎಂದು ಹೇಳಿದರು.

ಸಿಂದಗಿ ಹಾಗೂ ಹಾನಗಲ್ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ನಿಟ್ಟಿನಲ್ಲಿ ಪಕ್ಷದ ಮುಖಂಡರು, ಸಚಿವರು, ಶಾಸಕರು, ಕಾರ್ಯಕರ್ತರು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ರಮೇಶ ಭೂಸನೂರ ಅವರು ಹಿಂದೆಯೂ ಶಾಸಕರಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ, ಕ್ಷ ಅವರಿಗೆ ಟಿಕೆಟ್ ನೀಡಿದೆ. ಪಕ್ಷದ ನಾಯಕರೂ, ಮಾಜಿ ಮುಖ್ಯಮಂತ್ರಿಗಳೂ ಆದ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲರೂ ಒಟ್ಟಾಗಿ ಚುನಾವಣೆಯನ್ನು ಎದುರಿಸಲಿದ್ದೇವೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಶಾರುಖ್​ ಖಾನ್​ ಪಾರ್ಟಿಯಲ್ಲಿ ನಶೆ ತುಂಬಿ ತುಳುಕುತ್ತಿತ್ತು ಎಂದ ಶೆರ್ಲಿನ್

Thu Oct 7 , 2021
ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನ ಬಾಲಿವುಡ್ ನಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಬಾಲಿವುಡ್‌ನಲ್ಲಿ ಮತ್ತೆ ಡ್ರಗ್ಸ್ ಪ್ರಕರಣ ಸದ್ದು ಮಾಡುತ್ತಿದೆ ಇದೀಗ ಶಾರುಖ್ ಬಗ್ಗೆ ನಟಿ ಶರ್ಲಿನ್ ಚೋಪ್ರಾ ಹೇಳಿದ್ದ ಹೇಳಿಕೆ ವೈರಲ್ ಆಗಿದೆ. “ಪಾರ್ಟಿಯಲ್ಲಿ ಡ್ಯಾನ್ಸ್​ ಮಾಡುತ್ತ ನನಗೆ ಸುಸ್ತಾಯಿತು. ಹಾಗಾಗಿ ಶೌಚಾಲಯಕ್ಕೆ ತೆರಳಿದೆ. ಬಾಗಿಲು ತೆರೆದು ನೋಡಿದಾಗ ನನಗೆ ಶಾಕ್​ ಆಯಿತು. ನಾನೇನಾದರೂ ತಪ್ಪಾದ ಜಾಗಕ್ಕೆ ಬಂದು ಬಿಟ್ನಾ ಎಂದು ಅನುಮಾನ ಬಂತು. ಹಾಗೇನೂ ಇಲ್ಲ, ಅದು […]

Advertisement

Wordpress Social Share Plugin powered by Ultimatelysocial