ಬೆಂಗಳೂರು ಜನವರಿ 28: ‘ಕೈ’ ಬಿಟ್ಟು ‘ತೆನೆ’ ಹೋರುವುದಾಗಿ ಘೋಷಿಸಿದ್ದ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರ ಜತೆ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಶಾಸಕಾಂಗ ನಾಯಕರೂ ಅದ ಎಚ್.ಡಿ.ಕುಮಾರಸ್ವಾಮಿ ಅವರು ಮಹತ್ವದ ಮಾತುಕತೆ ನಡೆಸಿದರು. ಮಾತುಕತೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಇಬ್ರಾಹಿಂ ಇನ್ನೂ ತೀರ್ಮಾನ ತೆಗೆದುಕೊಳ್ಳಬೇಕಿದೆ ಎಂದಿದ್ದಾರೆ.ತಮ್ಮ ಸ್ವಕ್ಷೇತ್ರಕ್ಕೆ ಇಂದು ಬೆಳಗ್ಗೆಯಿಂದಲೇ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಮಾಜಿ ಮುಖ್ಯಮಂತ್ರಿಗಳು, ಸಂಜೆ ಹೊತ್ತಿಗೆ ಇಬ್ರಾಹಿಂ ಅವರ ನಿವಾಸಕ್ಕೆ ಭೇಟಿ ನೀಡಿದರು. ಅವರೊಂದಿಗೆ ಚರ್ಚೆಯ ಬಳಿಕ ಮಾತನಾಡಿದ ಹೆಚ್ಡಿ ಕುಮಾರಸ್ವಾಮಿ, ‘ಏನೂ ಒತ್ತಡ ಹಾಕಿ ತೀರ್ಮಾನ ತೆಗೆದುಕೊಳ್ಳಲು ಆಗಲ್ಲ. ಹಿಂದಿನ ಕೆಲವು ಘಟನೆಗಳನ್ನು ಇಬ್ರಾಹಿಂ ಮೆಲುಕು ಹಾಕಿದ್ದಾರೆ. ನೋವಿನಿಂದ ಹಿಂದಿನ ಘಟನೆಗಳನ್ನು ಇಬ್ರಾಹಿಂ ಹೇಳಿಕೊಂಡಿದ್ದಾರೆ’ ಎಂದು ಹೇಳಿದ್ದಾರೆ.ದೇವೇಗೌಡರಿಗೂ ಇಬ್ರಾಹಿಂ ಅವರಿಗೂ ಇರುವ ನಂಟು ಸಿದ್ದರಾಮಯ್ಯ ರಾಜಕೀಯಕ್ಕೆ ಬರುವ ಮುಂದಿನಿಂದಲೂ ಇದೆ. 1972 ಗೌಡರ ಜೊತೆ ಇಬ್ರಾಹಿಂ ಸಂಬಂಧ ಇದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳನ್ನ ಜನ ತಿರಸ್ಕಾರ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಯಾವಾಗ ತೀರ್ಮಾನ ಮಾಡಿದ್ರೂ ತುಂಬು ಹೃದಯದ ಸ್ವಾಗತ.ದೇವೇಗೌಡರಿಗೂ ಇಬ್ರಾಹಿಂ ಅವರಿಗೂ ಇರುವ ನಂಟು ಸಿದ್ದರಾಮಯ್ಯ ರಾಜಕೀಯಕ್ಕೆ ಬರುವ ಮುಂದಿನಿಂದಲೂ ಇದೆ. 1972 ಗೌಡರ ಜೊತೆ ಇಬ್ರಾಹಿಂ ಸಂಬಂಧ ಇದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳನ್ನ ಜನ ತಿರಸ್ಕಾರ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಯಾವಾಗ ತೀರ್ಮಾನ ಮಾಡಿದ್ರೂ ತುಂಬು ಹೃದಯದ ಸ್ವಾಗತ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada