ಕೋಲಾರ : ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಹಲವು ಭಾರಿ ಘೋಷಣೆ ಮಾಡಿದ್ದಾರೆ.
ಇದೀಗ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವಂತೆ ಬಿಜೆಪಿ ಕೃಷ್ಣಾರೆಡ್ಡಿಗೆ ಆಫರ್ ನೀಡಿದೆ ಎನ್ನಲಾಗಿದೆ.
ನಾವೇ ದುಡ್ಡು ಕೊಡುತ್ತೇವೆ, ನೀವು ಸಿದ್ದರಾಮಯ್ಯ ವಿರುದ್ಧ ಚುನಾವಣೆಗೆ ನಿಲ್ಲಿ ಎಂದು ಸಚಿವ ಸುಧಾಕರ್ ಆಫರ್ ನೀಡಿದ್ದಾರೆ ಎಂದು ಶಾಸಕ ಶ್ರೀನಿವಾಸ ಗೌಡ ಹೇಳಿದ್ದಾರೆ.
ಕೋಲಾರ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೃಷ್ಣಾರೆಡ್ಡಿ ಮನೆಗೆ ಜ.25 ರಂದು ಭೇಟಿ ನೀಡಿದ ಸಚಿವ ಸುಧಾಕರ್ ‘ ನಾವೇ ಹಣ ಕೊಡುತ್ತೇವೆ, ನೀವು ಸಿದ್ದರಾಮಯ್ಯ ವಿರುದ್ಧ ಕೋಲಾರದಲ್ಲಿ ಚುನಾವಣೆಗೆ ನಿಲ್ಲಿ ಎಂದು ಸಚಿವ ಸುಧಾಕರ್ ಆಫರ್ ನೀಡಿದ್ದಾರೆ ಎಂದು ಶಾಸಕ ಶ್ರೀನಿವಾಸ ಗೌಡ ಹೇಳಿದ್ದಾರೆ. ಶಾಸಕ ಶ್ರೀನಿವಾಸ ಗೌಡ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada