ಕೆಂಗೇರಿ ಮೋರಿ ತಡೆಗೋಡೆ ಕುಸಿತ

ಬೆಂಗಳೂರು ನಗರದಲ್ಲಿ ನಿನ್ನೆ ತಡರಾತ್ರಿ ಸುರಿದ ಭಾರಿ ಮಳೆಯಿಂದ ಕೆಂಗೇರಿ ಮೋರಿ ತಡೆಗೋಡೆ ಕುಸಿದು ರಸ್ತೆಯೆಲ್ಲಾ ನದಿಯಂತಾಗಿದೆ. ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಕೆಂಗೇರಿ ಬಳಿ ಚಾಲಕರು ಅಸ್ತವ್ಯಸ್ತಗೊಂಡು ಟ್ರಾಫಿಕ್ ಜಾಮ್ ಉಂಟಾಗಿದೆ. ನಿನ್ನೆ ತಡರಾತ್ರಿ ಸುರಿದ ಮಳೆಗೆ ವೃಷಭಾವತಿ ನದಿ ಉಕ್ಕಿ ಹರಿದಿತ್ತು. ಕೆಂಗೇರಿಯ ದುಬಾಸಿಪಾಳ್ಯ ಬಳಿ ನದಿಯ ಹರಿವಿನ ರಭಸಕ್ಕೆ ತಡೆಗೋಡೆ ಕೊಚ್ಚಿಹೋಗಿದೆ. ತಡೆಗೋಡೆ ಕೊಚ್ಚಿಹೋದ ಪರಿಣಾಮ ಮೈಸೂರು ರಸ್ತೆಗೆ ನೀರು ಹರಿದಿದ್ದು, ರಸ್ತೆಯ ಒಂದು ಭಾಗ ಕುಸಿತವಾಗಿದೆ. ವಿಷಯ ತಿಳಿದ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ. ನೀರಿನ ಹರಿವು ಕಡಿಮೆಯಾಗದೇ ದುರಸ್ಥಿ ಕಾಮಗಾರಿ ನಡೆಸಲು ಸಾಧ್ಯವಿಲ್ಲ ಎಂದಿದ್ದಾರೆ.

 

 

 

Please follow and like us:

Leave a Reply

Your email address will not be published. Required fields are marked *

Next Post

.ಬಿಎಸ್‌ವೈ ನೇತೃತ್ವದಲ್ಲಿ ಸರ್ವಪಕ್ಷ ಸಭೆ...

Fri Jun 26 , 2020
ವಿಧಾನಸೌಧದಲ್ಲಿ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ರ‍್ವಪಕ್ಷ ಸಭೆ ಆರಂಭವಾಗಿದ್ದು, ಹಲವು ಸಚಿವರು,ಶಾಸಕ,ಸಂಸದರು ಭಾಗಿಯಾಗಿದ್ದಾರೆ.ರಾಜ್ಯದಲ್ಲಿ ಕೊರೊನಾ ಹೆಚ್ಚಳ ಹಿನ್ನಲೆ, ಕೋವಿಡ್ ನಿಯಂತ್ರಣ ಸಂಬಂಧ ಶಾಸಕ,ಸಚಿವರ ಅಭಿಪ್ರಾಯ ಸಂಗ್ರಹಿಸಿ ರ‍್ಚೆ ನಡೆಸಲಾಗುತ್ತದೆ. ಇನ್ನು ಲಾಕ್ ಡೌನ್ ಗೆ ಬಹುತೇಕ ಕಾಂಗ್ರೆಸ್ ಶಾಸಕರು ವಿರೋಧ ವ್ಯಕ್ತ ಪಡಿಸಿದ್ದು, ಲಾಕ್ ಡೌನ್ ನಿಂದ ಜನಜೀವನ ಸಂಕಷ್ಟದ ಪರಿಸ್ಥಿತಿ ತಲುಪುತ್ತದೆ. ಲಾಕ್ ಡೌನ್ ಬದಲು ಅಗತ್ಯವಿರುವ ಕಡೆ ಕಟ್ಟುನಿಟ್ಟಿನ ಸೀಲ್ ಡೌನ್ ಮಾಡಬೇಕು, ಕೋವಿಡ್ ಟೆಸ್ಟ್ […]

Advertisement

Wordpress Social Share Plugin powered by Ultimatelysocial