ಕೆಲವು ಜಿಲ್ಲೆಗಳಲ್ಲಿ ಕೊರೋನಾ ಕಂಟ್ರೋಲ್ ತಪ್ಪುತ್ತಿದೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಕಂಟ್ರೋಲ್ ತಪ್ಪುತ್ತಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್‌ವೈ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊರೋನಾ ಕಂಟ್ರೋಲ್ ತಪ್ಪುತ್ತಿದ್ದು, ಜಿಲ್ಲಾಧಿಕಾರಿಗಳು ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಕೋವಿಡ್ ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಆಂಬುಲೆನ್ಸ್ ಬೇಕು. ಹೆಚ್ಚುವರಿ ಆಂಬುಲೆನ್ಸ್ಗಳ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ ಎಂದರು. ರಾಜ್ಯಕ್ಕೆ ಈಗಾಗಲೇ ಕೇಂದ್ರ ತಂಡ ಬಂದು ರಾಜ್ಯದ ಕೊರೊನಾ ಪರಿಸ್ಥಿತಿಯನ್ನು ನೋಡಿಕೊಂಡು ಹೋಗಿದ್ದು, ಸರ್ಕಾರ ತೆಗೆದುಕೊಂಡಿರುವ ಕೆಲವು ನಿರ್ಧಾರಗಳಿಗೆ ಮೆಚ್ಚುಗೆ ಸೂಚಿಸಿದೆ. ಹಾಗೆ ಕೆಲವು ಮುನ್ನೇಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆಗಳನ್ನು ನೀಡಿದೆ ಎಂದರು.

Please follow and like us:

Leave a Reply

Your email address will not be published. Required fields are marked *

Next Post

ದಾಖಲೆ ಬರೆದ ಪೋರ-ವಿಶ್ವಪ್ರಸಿದ್ದ ಏಕಶಿಲಾ ಬೆಟ್ಟ ಏರಿದ ಬಾಲಕ

Thu Jul 9 , 2020
ಮಧುಗಿರಿಯಲ್ಲಿ ನಾಲ್ಕನೇ ವಯಸ್ಸಿನಲ್ಲಿಯೇ ಪೋರನೊಬ್ಬ ವಿಶ್ವಪ್ರಸಿದ್ದ ಏಕಶಿಲಾ ಬೆಟ್ಟ ಏರಿ ಏಷ್ಯಾ ಬುಕ್ ಆಫ್ ರೆಕಾರ್ಡ್ನಲ್ಲಿ ತನ್ನ ಹೆಸರನ್ನು ಗ್ರಾಂಡ್ ಮಾಸ್ಟರ್ ಫಾರ್ ಟ್ರಕ್ಕಿಂಗ್ ದಿ ಮಧುಗಿರಿ ಪೋರ್ಟ್ ಹಿಲ್ ಎಂದು ದಾಖಲೆ ಮಾಡಿದ್ದಾನೆ. ಕಮಲೇಶ್ ರವರ ಪುತ್ರ ಪೂರ್ವಿಕ್. ಕೆ ಸುಂಕು ತನ್ನ ನಾಲ್ಕನೇ ವಯಸ್ಸಿನಲ್ಲಿ ಮಧುಗಿರಿ ಬೆಟ್ಟವನ್ನು ಪೂರ್ತಿ ಹತ್ತಿ ಏಷಿಯಾ ಬುಕ್ ಆಫ್ ರೆಕಾಡ್ಸ್ನಲ್ಲಿ ದಾಖಲೆ ಮಾಡಿದ್ದಾನೆ ಹಾಗೂ ಭಗವದ್ಗೀತೆಯ ಮತ್ತು ಹನುಮಾನ್ ಚಾಲಿಸಾದ ಕೆಲವು […]

Advertisement

Wordpress Social Share Plugin powered by Ultimatelysocial