ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕೋವಿಡ್-19 ಕೇಸ್ ಗಳ ಉತ್ತಮ ಚಿಕಿತ್ಸೆಗಾಗಿ ಆಹಾರ ಸಚಿವ ಹಾಗೂ ಸ್ಥಳೀಯ ಶಾಸಕರಾದ ಕೆ.ಗೋಪಾಲಯ್ಯ ರವರ ನೇತೃತ್ವದಲ್ಲಿ ಸುಮಾರು 250 ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆದು ಮತ್ತು ಸೋಂಕು ನಿವಾರಕ ಸಿಂಪಡಿಸುವ ವಿನೂತನ ವಾಹನ ಸಿದ್ಧತೆ ಮಾಡಿದ್ದಾರೆ. ಬಸವೇಶ್ವರ ನಗರದ ಶಂಕಮಠ ಪ್ರಿಸ್ಟೈನ್ ನರ್ಸಿಂಗ್ ಹೋಮ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಶ್ರೀ ಸುರೇಶ್ ಕುಮಾರ್ ಮತ್ತು ಆಹಾರ ಸಚಿವ ಕೆ.ಗೋಪಾಲಯ್ಯ ಕೋವಿಡ್ ವಾರ್ಡ್ ಉದ್ಘಾಟನೆ ಮಾಡಿದ್ದರು. ನಮ್ಮ ಕ್ಷೇತ್ರದ ಜನರಿಗೆ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಮಾಡಲಾಗ್ತಾ ಇದೆ ಪ್ರಿಸ್ಟೀನ್ ಆಸ್ಪತ್ರೆಯಲ್ಲಿ ಇಂದು 150 ಬೆಡ್ ಗಳನ್ನ ನಿಯೋಜನೆ ಮಾಡಲಾಗಿದೆ. ಕೊರೊನಾ ನಿಯಂತ್ರಣಕ್ಕೆ ನಮ್ಮ ಸರ್ಕಾರ ಶ್ರಮಿಸುತ್ತಿದೆ ಯಾರೂ ಹೆದರುವ ಅವಶ್ಯಕತೆ ಇಲ್ಲ. ಎಂದು ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.
ಕೆ.ಗೋಪಾಲಯ್ಯ ನೇತೃತ್ವದಲ್ಲಿ ಕೋವಿಡ್ ಕೇರ್ಸೆಂಟರ್
Please follow and like us: