ಕೇಂದ್ರ ಸರ್ಕಾರಕ್ಕೆ ಖರ್ಗೆ ಆಗ್ರಹ

ಬೆಂಗಳೂರು: ಕೊರೊನಾ ಸಂಕಷ್ಟದಿAದ ಜನರನ್ನು ಪಾರು ಮಾಡಲು ಕೇಂದ್ರ ಸರ್ಕಾರ ಘೋಷಿಸಿರುವ ೨೦ ಲಕ್ಷ ಕೋಟಿ ಪರಿಹಾರ ಯಾರಿಗೂ ಪ್ರಯೋಜನಕ್ಕೆ ಬರದಂತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ವಲಸೆ ಕಾರ್ಮಿಕರ ಖಾತೆಗೆ ನೇರವಾಗಿ ಹಣ ಹಾಕುವುದರಿಂದ ಅವರಿಗೆ ಸಹಾಯವಾದಂತಾಗುತ್ತದೆ.
ಇದರಿಂದ ವಲಸೆ ಕಾರ್ಮಿಕರು ಅಗತ್ಯ ವಸ್ತುಗಳನ್ನು ಖರೀದಿಸಲು ಸಹಾಯವಾಗುವುದಲ್ಲದೇ ಆರ್ಥಿಕತೆಗೆ ಉತ್ತೇಜನವೂ ದೊರೆಯಲಿದೆ ಎಂದು ಹೇಳಿದ್ದಾರೆ. ವಲಸೆ ಕಾರ್ಮಿಕರ ಆರ್ಥಿಕ ಸ್ವಾತಂತ್ರ‍್ಯಕ್ಕಾಗಿ ಅವರ ಖಾತೆಗೆ ನೇರವಾಗಿ ಹಣ ವರ್ಗಾಯಿಸುವಂತೆ ದೇಶದ ಪ್ರಮುಖ ಉದ್ಯಮಿಗಳು ಶಿಫಾರಸ್ಸು ಮಾಡಬೇಕೆಂದು ಒತ್ತಾಯಿಸಿದ್ದಾರೆ. ಮುಂದಿನ ಆರು ತಿಂಗಳುಗಳ ಕಾಲ ಪ್ರತಿ ತಿಂಗಳು ೧೦ ಸಾವಿರ ರು.ಗಳನ್ನು ವಲಸೆ ಕಾರ್ಮಿಕರಿಗೆ ನೇರವಾಗಿ ನೀಡಿ ಎಂದು ಸಲಹೆ ಕೊಟ್ಟಿದ್ದಾರೆ. ರಾಜ್ಯಗಳಿಗೆ ಡಿಸೆಂಬರ್, ಜನವರಿ ತಿಂಗಳ ಜಿಎಸ್‌ಟಿ ಪರಿಹಾರದ ಸುಮಾರು ೩೪ ಸಾವಿರ ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಕೊರೊನಾ ನೆಪದಲ್ಲಿ ಸುಧಾರಣೆ ಕಾರಣ ನೀಡಿ ಸಾರ್ವಜನಿಕ ಉದ್ದಿಮೆಗಳನ್ನು ಮಾರಾಟ ಮಾಡುವ ಪ್ರಯತ್ನದಲ್ಲಿ ಕೇಂದ್ರ ಸರಕಾರ ತೊಡಗಿದೆ ಎಂದು ಖರ್ಗೆ ಕಿಡಿಕಾರಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಪಡಿತರ ಚೀಟಿ ಇಲ್ಲದವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

Tue May 26 , 2020
ಬೆಂಗಳೂರು: ಪಡಿತರ ಚೀಟಿ ಇಲ್ಲದವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇಂದಿನಿAದ ಮೇ ೩೦ ರ ವರೆಗೆ ಪಡಿತರ ಚೀಟಿ ಇಲ್ಲವರಿಗೂ ಸರ್ಕಾರಿ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ನಡೆಯಲಿದೆ. ಆಹಾರ ಸಚಿವ ಕೆ. ಗೋಪಾಲಯ್ಯ ಇಂದು ಪಡಿತರ ಅಂಗಡಿಗಳಿಗೆ ಭೇಟಿ ನೀಡಿ ಪಡಿತರ ವಿತರಣಾ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಬಳಿಕ ಮಾತನಾಡಿದ ಅವರು ಪ್ರತಿ ಒಬ್ಬ ವ್ಯಕ್ತಿಗೆ ೫ ಕೆ.ಜಿ. ಅಕ್ಕಿ, ಎರಡು ಕೆ.ಜಿ ಬೇಳೆ ವಿತರಿಸಲಾಗುತ್ತಿದೆ […]

Advertisement

Wordpress Social Share Plugin powered by Ultimatelysocial