ಕೇಂದ್ರ ಸರ್ಕಾರದಿಂದ ಕಾರ್ಮಿಕರಿಗೆ ಸಿಹಿಸುದ್ದಿ

ಕೇಂದ್ರ ಸರ್ಕಾರ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನ ನೀಡಿದೆ ಹೌದು ಇನ್ನು ಮುಂದೆ ಹೆಚ್ಚುವರಿಯಾಗಿ ಕಾರ್ಮಿಕರನ್ನ ದುಡಿಸಿಕೊಂಡರೆ ಹೆಚ್ಚಿನ ವೇತನವನ್ನ ಖಡ್ಡಾಯವಾಗಿ ನೀಡಲೇಬೇಕು ಎನ್ನುವ ಆದೇಶವನ್ನ ಕೇಂದ್ರ ಸರ್ಕಾರ ಹೊರಡಿಸಿದೆ. ಕಾರ್ಮಿಕ ಸಚಿವಾಲಯದ ಕಾರ್ಯದರ್ಶಿ ಹಿರಾಲಾಲ್ ಸಮರೀಯಾ ಸಂಸದೀಯ ಸದನ ಸಮಿತಿಗೆ ಈ ಸಂಬAಧ ಸೂಚನೆ ನೀಡಿದ್ದು, ಕಾರ್ಮಿಕ ಕಾನೂನುಗಳ ಪ್ರಕಾರ ಅಧಿಕ ಅವಧಿಗೆ ದುಡಿಸಿಕೊಳ್ಳುವ ಕಾರ್ಮಿಕರಿಗೆ ಸೂಕ್ತ ಪರಿಹಾರ ನೀಡಬೇಕು. ಕೊರೊನಾ ಲಾಕ್‌ಡೌನ್ ಬಳಿಕ ಕೆಲವು ರಾಜ್ಯಗಳು ಕಾರ್ಮಿಕ ಕಾನೂನಿಗೆ ತಿದ್ದುಪಡಿ ಮಾಡಿ ಕೆಲಸದ ಅವಧಿಯನ್ನು ೮ ಗಂಟೆಯ ಬದಲಿಗೆ ೧೨ ಗಂಟೆಗಳ ಅವಧಿಗೆ ಹೆಚ್ಚಳ ಮಾಡಲಾಗಿದೆ. ಹೀಗಾಗಿ ಹೆಚ್ಚಿನ ಅವಧಿ ದುಡಿಸಿಕೊಳ್ಳುವ ಕಾರ್ಮಿಕರಿಗೆ ಹೆಚ್ಚುವರಿ ವೇತನ ನೀಡಬೇಕು ಎಂದು ಸದನ ಸಮಿತಿಗೆ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು ನಗರದಲ್ಲಿ ಭಾನುವಾರದ ಕರ್ಫ್ಯೂ ಮತ್ತೆ ಜಾರಿ

Tue Jul 21 , 2020
ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯಲು ಬೆಂಗಳೂರು ನಗರದಲ್ಲಿ ಘೋಷಣೆ ಮಾಡಿದ್ದ ಲಾಕ್ ಡೌನ್ ಬುಧವಾರ ಮುಂಜಾನೆ 5 ಗಂಟೆಗೆ ಅಂತ್ಯಗೊಳ್ಳಲಿದೆ. ಲಾಕ್ ಡೌನ್ ವಿಸ್ತರಣೆ ಮಾಡುವುದಿಲ್ಲ ಎಂದು ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದ್ದು, ಭಾನುವಾರದ ಕರ್ಫ್ಯೂ ಮತ್ತೆ ಜಾರಿಗೆ ಬರಲಿದೆ. ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 6 ಗಂಟೆಯ ತನಕ ಕರ್ಫ್ಯೂ ಜಾರಿಯಲ್ಲಿರುತ್ತದೆ.ಕರ್ನಾಟಕ ಸರ್ಕಾರ ಜುಲೈ 14ರಿಂದ 22ರ ಬೆಳಗ್ಗೆ 5ಗಂಟೆ ತನಕ ಬೆಂಗಳೂರು ನಗರ ಮತ್ತು […]

Advertisement

Wordpress Social Share Plugin powered by Ultimatelysocial