ಕೇಂದ್ರ ಸರ್ಕಾರ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನ ನೀಡಿದೆ ಹೌದು ಇನ್ನು ಮುಂದೆ ಹೆಚ್ಚುವರಿಯಾಗಿ ಕಾರ್ಮಿಕರನ್ನ ದುಡಿಸಿಕೊಂಡರೆ ಹೆಚ್ಚಿನ ವೇತನವನ್ನ ಖಡ್ಡಾಯವಾಗಿ ನೀಡಲೇಬೇಕು ಎನ್ನುವ ಆದೇಶವನ್ನ ಕೇಂದ್ರ ಸರ್ಕಾರ ಹೊರಡಿಸಿದೆ. ಕಾರ್ಮಿಕ ಸಚಿವಾಲಯದ ಕಾರ್ಯದರ್ಶಿ ಹಿರಾಲಾಲ್ ಸಮರೀಯಾ ಸಂಸದೀಯ ಸದನ ಸಮಿತಿಗೆ ಈ ಸಂಬAಧ ಸೂಚನೆ ನೀಡಿದ್ದು, ಕಾರ್ಮಿಕ ಕಾನೂನುಗಳ ಪ್ರಕಾರ ಅಧಿಕ ಅವಧಿಗೆ ದುಡಿಸಿಕೊಳ್ಳುವ ಕಾರ್ಮಿಕರಿಗೆ ಸೂಕ್ತ ಪರಿಹಾರ ನೀಡಬೇಕು. ಕೊರೊನಾ ಲಾಕ್ಡೌನ್ ಬಳಿಕ ಕೆಲವು ರಾಜ್ಯಗಳು ಕಾರ್ಮಿಕ ಕಾನೂನಿಗೆ ತಿದ್ದುಪಡಿ ಮಾಡಿ ಕೆಲಸದ ಅವಧಿಯನ್ನು ೮ ಗಂಟೆಯ ಬದಲಿಗೆ ೧೨ ಗಂಟೆಗಳ ಅವಧಿಗೆ ಹೆಚ್ಚಳ ಮಾಡಲಾಗಿದೆ. ಹೀಗಾಗಿ ಹೆಚ್ಚಿನ ಅವಧಿ ದುಡಿಸಿಕೊಳ್ಳುವ ಕಾರ್ಮಿಕರಿಗೆ ಹೆಚ್ಚುವರಿ ವೇತನ ನೀಡಬೇಕು ಎಂದು ಸದನ ಸಮಿತಿಗೆ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ಕಾರ್ಮಿಕರಿಗೆ ಸಿಹಿಸುದ್ದಿ
Please follow and like us: