ನೆರೆಯ ರಾಜ್ಯ ಆಂಧ್ರಪ್ರದೇಶದ ವೈಜಾಗ್ ನಲ್ಲಿ ಸಂಭವಿಸಿರುವ ಭೀಕರ ವಿಷಾನಿಲ ಸೋರಿಕೆ ಹಿನ್ನೆಲೆ ರಾಜ್ಯದಲ್ಲೂ ಕೈಗಾರಿಕೆ ಆರಂಭಿಸುವ ಮುನ್ನ ಸುರಕ್ಷತಾ ಕ್ರಮಗಳನ್ನು ಖಾತರಿ ಪಡಿಸುವಂತೆ ಕೈಗಾರಿಕಾ ಘಟಕಗಳ ವ್ಯವಸ್ಥಾಪಕರಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ವಿಶಾಖಪಟ್ಟಣದ ವಿಷಾನಿಲ ಸೋರಿಕೆಯ ದುರಂತ ಘಟನೆ ದುರದೃಷ್ಟಕರ . ಇಂತಹ ಘಟನೆ ಎಲ್ಲಿಯೂ ಮರುಕಳಿಸಬಾರದು.
ಈ ಹಿನ್ನೆಲೆ, ಎರಡು ತಿಂಗಳ ನಂತರ ತಮ್ಮ ಕೈಗಾರಿಕೆಗಳನ್ನು ಆರಂಭಿಸುತ್ತಿರುವ ವ್ಯವಸ್ಥಾಪಕರು, ಈ ದುರಂತದ ಘಟನೆಯನ್ನು ಎಚ್ಚರಿಕೆಯ ಪಾಠವಾಗಿ ತೆಗೆದುಕೊಳ್ಳಬೇಕು. ಹಾಗಾಗಿ, ಎಲ್ಲ ಸುರಕ್ಷಿತ ಮುಂಜಾಗರೂಕತಾ ಕ್ರಮಗಳನ್ನು ಖಾತರಿಪಡಿಸಿಕೊಂಡ ಮೇಲೆ ಉತ್ಪಾದನೆ ಆರಂಭಿಸಬೇಕೆಂದು’ ವಿನಂತಿಸಿದ್ದಾರೆ.