ಕೊರೊನಾಗೆ ಔಷಧಿ ಇಲ್ಲದಿದ್ದರೂ ಮನಃ ಶಾಂತಿಗಾಗಿ ರಾಸಾಯನಿಕ ಸಿಂಪಡಿಸಲಾಗುತ್ತಿದೆ ಎಂದು ಸಚಿವ ಭೈರತಿ ಬಸವರಾಜ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿ ರಾಸಾಯನಿಕ ದ್ರಾವಣ ಸಿಂಪಡಿಸುವ ಮೂಲಕ ಸ್ಯಾನಿಟೈಶೇಷನ್ ಮಾಡಲಾಗುತ್ತಿದೆ. ಕೊರೊನಾ ಸಮಯದಲ್ಲಿ ಮನಃಶಾಂತಿಗಾಗಿ ಏನಾದರೂ ಮಾಡಬೇಕಲ್ಲ. ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನಚ್ಚರಿಕೆಯಾಗಿ ರಾಸಾಯಿಕ ಸಿಂಪಡಣೆ ಮಾಡಲಾಗುತ್ತಿದೆ. ರಾಜ್ಯ, ಕೇಂದ್ರ ಗಳ ಸಲಹೆ ಮೇರೆಗೆ ಈ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕೊರೊನಾಕ್ಕೆ ಔಷಧಿ ಇಲ್ಲ..!
Please follow and like us: