ಕೊರೊನಾದಿಂದ ಕೆರೆ ಕಾಮೇಗೌಡರು ಗುಣಮುಖ

ಮಂಡ್ಯದ ಕೆರೆ ಕಾಮೇಗೌಡರು ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ, ೮೨ ವರ್ಷದ ಕಾಮೇಗೌಡರು ಈಚೆಗೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕಾಲಿಗೆ ತೀವ್ರ ಗಾಯವಾಗಿತ್ತು. ಬಲಗಾಲಿನ ನರ ಸಂಬAಧಿ ಕಾಯಿಲೆಯ ಗಾಯ ಉಲ್ಬಣಗೊಂಡಿದ್ದ ಹಿನ್ನೆಲೆ ಮಳವಳ್ಳಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಮಯದಲ್ಲೇ ಅವರಿಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿತ್ತು. ಕಳೆದ ವಾರ ಮಂಡ್ಯದ ಕಾಮೇಗೌಡರನ್ನು ಕೊವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರಿಗೆ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ರಾಜಕೀಯ ಮುಖಂಡರೂ ಸರ್ಕಾರವನ್ನು ಒತ್ತಾಯಿಸಿದ್ದರು. ಹಲವರು ಅವರು ಬೇಗ ಗುಣಮುಖರಾಗಲೆಂದು ಹಾರೈಸಿದ್ದರು.ಇದೀಗ ಅವರು ಕೊರೊನಾ ಸೋಂಕಿನಿAದ ಗುಣಮುಖರಾಗಿದ್ದಾರೆ. ಸದ್ಯಕ್ಕೆ ಕಾಮೇಗೌಡರ ಕಾಲಿನ ಗಾಯಕ್ಕೆ ಮನೆಯಲ್ಲಿಯೇ ಚಿಕಿತ್ಸೆಗೆ ವೈದ್ಯರು ಸೂಚನೆ ನೀಡಿದ್ದಾರೆ.ಈಚೆಗೆ ಕಾಮೇಗೌಡರ ಕೆರೆ ಕಟ್ಟು ಕಾಯಕವನ್ನು ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಪ್ರಶಂಸಿಸಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ

Sun Aug 2 , 2020
ಕಳೆದ ಮೂರು ವರ್ಷಗಳಿಂದ ಉತ್ತರ ಪ್ರದೇಶದ ಸಾರಿಗೆ ನಿಗಮ ರಕ್ಷಾ ಬಂಧನ ನಿಮಿತ್ತ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ನೀಡುತ್ತಿದೆ. ಈ ವರ್ಷವು ಕೂಡ ಅದೇ ಪದ್ಧತಿಯನ್ನು ಮುಂದುವರಿಸಿದೆ. ಈ ವರ್ಷವೂ ರಕ್ಷಾ ಬಂಧನ ದಿನದಂದು ಮಹಿಳೆಯರಿಗೆ ಫ್ರೀ ರೈಡ್ ಗಿಫ್ಟ್ ನೀಡಲಾಗುತ್ತಿದೆ. ಎಲ್ಲಾ ಮಾದರಿಯ ಬಸ್ಸ್ನಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವಂತೆ ಸಿಎಂ ಯೋಗಿ ಆದಿತ್ಯನಾಥ್ ಸೂಚನೆ. ಇದರ ಜೊತೆಗೆ ರಾಜಸ್ಥಾನದಲ್ಲೂ ಕೂಡ ಮಹಿಳೆಯರಿಗೆ ರಕ್ಷಾ ಬಂಧನದoದು ಪ್ರಯಾಣ […]

Advertisement

Wordpress Social Share Plugin powered by Ultimatelysocial