ಕೊರೊನಾ ಜೊತೆ ಬದುಕೋದು ಅನಿವಾರ್ಯ-ಸಿಎಂ

ರಾಜ್ಯದಲ್ಲಿ ಕೊರೊನಾ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಜನತೆ ಕೊರೊನಾ ಬಗ್ಗೆ ಭಯ ಪಡುವುದು ಬೇಡ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೀಗಾಗಿ ಜನತೆ ಭೀತಿಗೊಳಗಾಗುವುದು ಬೇಡ. ರಾಜ್ಯದಲ್ಲಿ ಆಂಬುಲೆನ್ಸ್ಗಳ ಸಂಖ್ಯೆ ಹೆಚ್ಚಳ ಮಾಡಿದ್ದು, ೪೫೦ ಅಂಬುಲೆನ್ಸ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ಅಗತ್ಯವಿದ್ದರೆ ಇನ್ನು ೨೦೦ ಅಂಬುಲೆನ್ಸ್ಗಳನ್ನು ವ್ಯವಸ್ಥೆ ಮಾಡಲಾಗುವುದು. ಬೆಂಗಳೂರಿನ ಆಸ್ಪತ್ರೆಗಳಲ್ಲಿ ಬೆಡ್ ಸೇರಿದಂತೆ ಸಕಲ ವ್ಯವಸ್ಥೆ ಮಾಡಲಾಗಿದೆ. ರೋಗಿಗಳಿಗೆ ಯಾವುದೇ ತೊಂದರೆಯಾಗದAತೆ ಕ್ರಮ ಕೈಗೊಳ್ಳುವುದಾಗಿ. ಕೊರೊನಾ ಬಗ್ಗೆ ಜನತೆಗೆ ಭಯ ಬೇಡ. ಕೊರೊನಾ ಜೊತೆ ಬದುಕಲು ಕಲಿಯಬೇಕಿದೆ.ಇನ್ನು ಮೆಡಿಕಲ್ ಸಲಕರಣೆ ಖರೀದಿಯಲ್ಲಿ ಅವ್ಯವಹಾರ ನಡೆರುವ ಬಗ್ಗೆ ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ಮೆಡಿಕಲ್ ಸಲಕರಣೆ ಖರೀದಿಗೆ ಸಂಬAಧಿಸಿದAತೆ ಅಧಿಕಾರಿಗಳು ದಾಖಲೆಗಳನ್ನು ಕೊಡುತ್ತಾರೆ. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ವಿಧಾನಸೌಧಕ್ಕೆ ಬರಲಿ, ಅಧಿಕಾರಿಗಳು ಇದಕ್ಕೆ ಸಂಬAಧಿಸಿದ ದಾಖಲೆಗಳನ್ನು ಕೊಡುತ್ತಾರೆ. ಅವರು ಪರಿಶೀಲನೆ ನಡೆಸಲಿ. ಯಾವುದೇ ಅಕ್ರಮವಾಗಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಅನಗತ್ಯವಾಗಿ ಆರೋಪ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.

Please follow and like us:

Leave a Reply

Your email address will not be published. Required fields are marked *

Next Post

ತಾಲ್ಲೂಕು ಪಂಚಾಯಿತಿ ಸೀಲ್‌ಡೌನ್

Mon Jul 6 , 2020
ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿಗೂ ಕೊರೊನಾ ಆತಂಕ ತಟ್ಟಿದ್ದು,೪೮ಗಂಟೆಗಳ ಸೀಲ್‌ಡೌನ್ ಮಾಡಲಾಗುತ್ತಿದೆ ಎಂದು ತಾಪಂ ಇಒ ಮುರುಡಯ್ಯ ತಿಳಿಸಿದ್ದಾರೆ. ತಾಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಸುತ್ತಿದ್ದ ಸಿಬ್ಬಂದಿಯೊಬ್ಬರ ಪತಿಗೆ, ಕೊರೊನ ದೃಢವಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ಸೂಚನೆಯ ಮೇರೆಗೆ ತಾಲೂಕು ಪಂಚಾಯಿತಿಗೆ ಔಷಧ ಸಿಂಪಡಿಸಿ ೪೮ ಗಂಟೆಗಳ ಕಾಲ ಸೀಲ್‌ಡೌನ್ ಮಾಡಲಾಗುತ್ತಿದೆ. ಕೊರೊನಾ ಸೋಂಕಿತನ ಮಡದಿ ತಾಲೂಕು ಪಂಚಾಯಿತಿಯಲ್ಲಿ ಪ್ರಮುಖವಾದ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಆಕೆಗೆ ಕೊರೊನಾ ಪರೀಕ್ಷೆ ನಡೆಸುತ್ತಿದ್ದು, ವರದಿಯ ನಂತರ ಮುಂದಿನ […]

Advertisement

Wordpress Social Share Plugin powered by Ultimatelysocial