ಕೊರೊನಾ ನಿಯಂತ್ರಣಕ್ಕೆ ಸಚಿವರ ನೇಮಕ/-ಸಚಿವ ಮಾಧುಸ್ವಾಮಿ

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ವಲಯವಾರು ರಚಿಸಿ, ಸಚಿವರನ್ನು ವಲಯದ ಉಸ್ತುವಾರಿಯಾಗಿ ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ತಡೆಗಟ್ಟಲು ಎಲ್ಲ ರೀತಿಯ ಚರ್ಚೆ ಮಾಡಿದ್ದೇವೆ. ಬೆಂಗಳೂರಿನಲ್ಲಿ ಎಂಟು ವಲಯಗಳಿವೆ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಲಾಕ್‌ಡೌನ್ ಬಗ್ಗೆ ಸದ್ಯ ಯಾವುದೇ ಚರ್ಚೆಯಾಗಿಲ್ಲ. ಜಿಲ್ಲಾವಾರು ನಿಗಾ ವಹಿಸಲು ಸೂಚಿಸಿದ್ದಾರೆ. ವಾರಾಂತ್ಯ ಲಾಕ್‌ಡೌನ್ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ತಂಡ ರಚಿಸಲಾಗಿದ್ದು, ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ ಪರಿಸ್ಥಿತಿ ನಿಯಂತ್ರಣ ಕೈ ತಪ್ಪಿದೆ..!

Thu Jul 9 , 2020
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೊರೋನಾ ಹಾವಳಿ ನಿಯಂತ್ರಣ ತಪ್ಪುತ್ತಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, “ನಾವು ೧೦,೦೦೦ ಹಾಸಿಗೆಗಳಿಗೆ ವ್ಯವಸ್ಥೆ ಮಾಡಿದ್ದೇವೆ. ಈಗಾಗಲೇ ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರ ತಂಡವು ಇಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ತೆಗೆದುಕೊಂಡ ಕೆಲವು ನಿರ್ಧಾರಗಳಿಗೆ ಮೆಚ್ಚುಗೆಯನ್ನು ಸೂಚಿಸಿದೆ. ಅಲ್ಲದೆ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಲಹೆಗಳನ್ನು ಸಹ ನೀಡಿದೆ. “ಕೊರೋನಾವೈರಸ್ ರೋಗಿಗಳಿಗೆ ತೊಂದರೆಯಾಗದAತೆ ಅವರನ್ನು ಕರೆದೊಯ್ಯಲು ಹೆಚ್ಚುವರಿ […]

Advertisement

Wordpress Social Share Plugin powered by Ultimatelysocial