ಮಳೆಗಾಲ ಪ್ರಾರಂಭವಾಗಿರುವುದರಿಂದ ಶೀತ ಜ್ವರ, ನೆಗಡಿ, ಕೆಮ್ಮು ಬರುವುದು ಸಾಮಾನ್ಯ. ಇದರಿಂದ ಜನರು ಆತಂಕಕ್ಕೆ ಒಳಗಾಗಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸಲಹೆ ನೀಡಿದ್ದಾರೆ. ಹಾಗೆಯೇ ಯಾವುದೇ ರೀತಿಯ ರೋಗದ ಲಕ್ಷಣ ಕಂಡುಬಂದ ಕೂಡಲೇ ಹತ್ತಿರದ ಫೀವರ್ ಕ್ಲಿನಿಕ್ಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆಯಿರಿ ಎಂದು ಟ್ವೀಟ್ ಮೂಲಕ ಜನರಿಗೆ ಸಲಹೆ ನೀಡಿದ್ದಾರೆ. ಅದಲ್ಲದೇ ಪ್ರಾಥಮಿಕ ಹಂತದಲ್ಲೇ ಎಚ್ಚರ ವಹಿಸಿದರೆ ಚಿಕಿತ್ಸೆ ಸುಲಭವಾಗಲಿದೆ. ಕೊರೊನಾ ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.