ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಮಹಾಮಾರಿಗೆ ಇಬ್ಬರು ಬಲಿಯಾಗಿದ್ದಾರೆ. ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳೂರು ಹೊರವಲಯದ ಸಂತೋಷ್ ನಗರ ನಿವಾಸಿ ಮತ್ತು ಉಳ್ಳಾಲ ನಿವಾಸಿ ಇಬ್ಬರಿಗೂ ಕೊರೊನಾ ವೈರಸ್ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು,ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.ಜಿಲ್ಲೆಯಲ್ಲಿ ಒಟ್ಟು 24 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ನಿನ್ನೆ ಒಂದೇ ದಿನ ಜಿಲ್ಲೆಯಲ್ಲಿ 147 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಈ ಮೂಲಕ ಸೋಂಕಿತರ ಸಂಖ್ಯೆ 1234 ಕ್ಕೆ ಏರಿಕೆಯಾಗಿದೆ.