ಬೀದರ್ ಆರ್ಥಿಕ ಸಂಕಷ್ಟದಲ್ಲೂ ಕೊರೊನಾ ವಿರುದ್ದ ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಮಾಸಿಕ ವೇತನ 12,000 ರೂ. ನೀಡುವಂತೆ ಆಗ್ರಹಿಸಿ ಭಾಲ್ಕಿ ಹಾಗೂ ಔರಾದ್ ತಾಲ್ಲೂಕಿನಲ್ಲಿಂದು ಆಶಾ ಕಾರ್ಯೆಕರ್ತೆಯರು ತಹಶೀಲ್ದಾರ್ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಆಶಾ ಕಾರ್ಯಕರ್ತೆಯರು ತಮ್ಮ ಜೀವನದ ಹಂಗು ತೊರೆದು ಕೋವಿಡ್ ವಿರುದ್ಧ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ನಮಗೆ ರಾಜ್ಯ ಸರಕಾರದಿಂದ ಮಾಸಿಕ 12,000 ರೂ. ವೇತನ ಜೊತೆಗೆ ಕೋವಿಡ್-19ರ ವಿರುದ್ಧ ಹೋರಾಟಕ್ಕೆ ಅಗತ್ಯವಿರುವ ಸುರಕ್ಷತಾ ಸಾಮಾಗ್ರಿಗಳನ್ನು ನೀಡಬೇಕು ,ಅಲ್ಲದೆ ಕೋವಿಡ್-19ರ ಸೋಂಕಿಗೆ ತುತ್ತಾದ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ಮತ್ತು ಸಂಪೂರ್ಣ ಚಿಕಿತ್ಸೆ ಸರಕಾರದಿಂದಲೆ ನೀಡಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಕೊರೊನಾ ವಿರುದ್ದ ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರು
Please follow and like us: