ಕೊರೊನಾ ಬಂದವರನ್ನು ಅಸಹ್ಯದಿಂದ ಕಾಣುವುದು ಬೇಡ. 97% ರಷ್ಟು ಜನರಿಗೆ ಕೊರೊನಾ ಸೋಂಕು ತಗುಲಿದರೂ ವಾಸಿಯಾಗುತ್ತೆ” ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು”. ”ಕೊರೊನಾ ಬಂದವರನ್ನು ಅಸಹ್ಯದಿಂದ ಕಾಣುವುದು ಬೇಡ. ಶೇ.97 ರಷ್ಟು ಜನಕ್ಕೆ ಕೊರೊನಾ ಬಂದರೂ ವಾಸಿಯಾಗುತ್ತೆ. ಕೊರೊನಾ ಬಂದರೆ ಆತಂಕ ಪಡುವ ಅಗತ್ಯ ಇಲ್ಲ. ಬಹಳ ಜನ ಕೊರೊನಾ ಬಂದ್ರೆ ಕಳಂಕ ಅಂತ ಅನ್ಕೊಂಡಿದ್ದಾರೆ. ಕೊರೊನಾ ಸಹ ಬೇರೆ ವೈರಸ್ ಥರ ಒಂದು ವೈರಸ್ ಅಷ್ಟೇ. ಸಹಜ ಜ್ವರ ಹೇಗೆ ಬರುತ್ತೋ ಇದೂ ಕೂಡಾ ಹಾಗೆ” ಎಂದು ಡಾ.ಕೆ.ಸುಧಾಕರ್ ಹೇಳಿದರು.
ಕೊರೊನಾ ಬಂದರೆ ಆತಂಕ ಪಡುವ ಅಗತ್ಯ ಇಲ್ಲ
Please follow and like us: