ಕೊರೊನಾ ಸೋಂಕಿತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..?

ಕೊರೊನಾ ಸೋಂಕಿತನ ಕುಟುಂಬಕ್ಕೆ ಸಾರ್ವಜನಿಕರು ಸಾಮಾಜಿಕ ಬಹಿಷ್ಕಾರ ಹಾಕಿರುವ ಆರೋಪ ಕೇಲಿಬಂದಿದೆ.ಜಿಲ್ಲೆಯ ಚಾಲುಕ್ಯ ನಗರದಲ್ಲಿರುವ ಸೋಂಕಿತರ ಕುಟುಂಬಕ್ಕೆ ಹಾಲು,ಪತ್ರಿಕೆ ಸೇರಿದಂತೆ ಅಗತ್ಯ ವಸ್ತುಗಳನ್ನು ಮನೆಗೆ ಪೂರೈಸದಂತೆ ಸ್ಥಳೀಯರು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ತೀವ್ರವಾಗಿ ನೋಂದಿರುವ ಕುಟುಂಬಸ್ಥರು ಪ್ರಧಾನಿ ಕಾರ್ಯಾಲಯ ಮುಖ್ಯಮಂತ್ರಿಗಳಿಗೆ,ಆರೋಗ್ಯ ಸಚಿವರಿಗೆ ಹಾಗೂ ಜಿಲ್ಲಾಧಿಕಾರಿಗೆ ಟ್ವೀಟ್ ಮಾಡುವ ಮೂಲಕ ದೂರು ನೀಡಿದ್ದಾರೆ.

ಇದುವರೆಗೂ ಮನೆಯಲ್ಲಿ ಒಬ್ಬ ವ್ಯಕ್ತಿಗೆ ಕೊರೊನಾ ಸೋಂಕು ದೃಢವಾಗಿದೆ.ಅವರನ್ನು ಮನೆಯ ಮೊದಲ ಮಹಡಿಯಲ್ಲಿ ಪ್ರತ್ಯೇಕವಾಗಿ ಇರಿಸಿದ್ದೇವೆ.ಮಾತ್ರೆ ಸೇರಿದಂತೆ ಇತರೆ ಔಷಧಗಳನ್ನು ಆರೋಗ್ಯ ಇಲಾಖೆ ನೀಡಿದೆ.ಕುಟುಂಬದ ಇತರ ಆರು ಜನರು ಕೆಳ ಮನೆಯಲ್ಲಿ ವಾಸವಾಗಿದ್ದೇವೆ.ಆದ್ರೆ ಮನೆಯ ಸುತ್ತಮುತ್ತಲ ಜನರ ವರ್ತನೆಯಿಂದಾಗಿ ನಾವು ಬೇಸತ್ತಿದ್ದೇವೆ.ನಮ್ಮ ಕುಟುಂಬಕ್ಕೆ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ರಾಯಚೂರು ಜಿಲ್ಲೆಯ ಬಿಜೆಪಿ ಮಹಿಳ ಮೋರ್ಚಾ ಹೊಸ ನೇಮಕ

Sat Aug 1 , 2020
ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಭಾರತೀಯ ಜನತಾ ಪಾರ್ಟಿಯ ತಾಲ್ಲೂಕಿನ ಮಹಿಳಾ ಮೋರ್ಚಾ ಅಧ್ಯಕ್ಷರನ್ನಾಗಿ ಹಂಪಮ್ಮ ಹುಲಿಮನಿ ಅವರನ್ನು ನೇಮಿಸಲಾಗಿದೆ. ಹಾಲಿ ಶಾಸಕರಾದ ಕೆ.ಶಿವನಗೌಡ ನಾಯಕ ಅವರ ಆದೇಶದ ಮೇರೆಗೆ ಭಾರತೀಯ ಜನತಾ ಪಾರ್ಟಿಯ ತಾಲ್ಲೂಕು ಅಧ್ಯಕ್ಷರಾದ ಜಂಬಣ್ಣ ನಿಲಗಲ್ ಇವರು ತಕ್ಷಣದಿಂದಲೇ ಪಕ್ಷದ ಸಂಘಟನೆಯ ಶಕ್ತಿಯನ್ನು ಹೆಚ್ಚಿಸಲು ಸಕ್ರಿಯವಾಗಿ ತೊಡಗಿಕೊಂಡು ಈ ನೂತನ ಜವಾಬ್ದಾರಿ ಕಾರ್ಯದಲ್ಲಿ ಪ್ರವೃತ್ತರಾಗಬೇಕು ಮತ್ತು ಪಕ್ಷ ನಿಷ್ಠೆಯಿಂದ ಕಾರ್ಯನಿರ್ವಹಿಸಲು ತಿಳಿಸಿದ್ದಾರೆ. Please follow and […]

Advertisement

Wordpress Social Share Plugin powered by Ultimatelysocial