ಕೊರೊನಾ ಸೋಂಕು ಕಾಶ್ಮೀರದಾದ್ಯಂತ ಉಲ್ಬಣ ಹಿನ್ನಲೆ

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಉಲ್ಲಭಣ ಹಿನ್ನಲೆ ಕೊವೀಡ್ ಲಾಕ್‌ಡೌನ್ ನಿರ್ಬಂಧಗಳನ್ನು ಆಗಸ್ಟ್ ೫ರವರೆಗೆ ಮುಂದುವರೆಸಲಾಗುವುದಾಗಿ ಜಮ್ಮು ಮತ್ತು ಕಾಶ್ಮೀರ ಸರ್ಕಾರ ತಿಳಿಸಿದೆ. ಜುಲೈ ೩೧ರ ವರೆಗೆ ಲಾಕ್‌ಡೌನ್ ಮುಂದುವರಿಸಲಾಗುವುದು ಎಂದು ಸರ್ಕಾರವು ತನ್ನ ಹಿಂದಿನ ಆದೇಶದಲ್ಲಿ ತಿಳಿಸಿತ್ತು. ದೇಶದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಲಾಕ್‌ಡೌನ್ ನಿರ್ಬಂಧಗಳನ್ನು ವಿಸ್ತರಿಸುವುದು ಸೂಕ್ತ ಎಂದು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.ಜಮ್ಮು ಕಾಶ್ಮೀರದಲ್ಲಿ ಶನಿವಾರ ಹೊಸದಾಗಿ ೬೧೩ ಸೋಂಕು ಪ್ರಕರಣಗಳು ವರದಿಯಾಗಿದ್ದು, ೧೧ ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ ೨೦,೯೭೨ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರದ ನಿಯಮ ಗಾಳಿಗೆ ತೂರಿದ ಸಚಿವ- ಶ್ರೀಮಂತ್ ಪಾಟೀಲ್  ವಿರುದ್ಧ ಕನ್ನಡ ಪರ ಸಂಘಟನೆಗಳಿಂದ ಆಕ್ರೋಶ

Sun Aug 2 , 2020
ಕರ್ನಾಟಕ ಸರ್ಕಾರದ ನಿಯಮಾವಳಿ ಗಾಳಿಗೆ ತೂರಿ ಮಹಾರಾಷ್ಟ್ರದ ಸಚಿವರೊಂದಿಗೆ ಶ್ರೀಮಂತ ಪಾಟೀಲ ಮರಾಠಿ ಕಾರ್ಯಕ್ರಮ ನಡೆಸುವ ಮೂಲಕ ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿಯಲ್ಲಿ ನಡೆದಿದೆ. ಮಹಾರಾಷ್ಟ್ರ,ಸಚೀವರು ಶಾಸಕ ರೊಂದಿಗೆ ಭಾಗಿಯಾದ ಕರ್ನಾಟಕದ ಜವಳಿ ಮತ್ತು ಅಲ್ಪಸಂಖ್ಯಾತ ಸಚೀವ ಶ್ರೀಮಂತ ಪಾಟೀಲ ಕಾರ್ಯಕ್ರಮದಲ್ಲಿ ಮರಾಠಿ ನಾಮಫಲಕ ರಾರಾಜಿಸಿದ ಘಟನೆ ನಡೆದಿದೆ. ಕೊವಿಡ್ ಪಾಜಿಟಿವ್ ಸಂಖ್ಯೆ ಹೆಚ್ಚುತ್ತಿದ್ದರೂ ಕೂಡ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, […]

Related posts

Advertisement

Wordpress Social Share Plugin powered by Ultimatelysocial