ಕೊರೋನಾ ಪೀಡಿತ ವ್ಯಕ್ತಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಅನುಮತಿ ನೀಡಿದ್ದು, ರಾಜ್ಯದಲ್ಲಿ ಈ ಮಾದರಿಯ ಚಿಕಿತ್ಸೆ ಮುಂದುವರೆಸಬಹುದು ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರೋನಾದಿಂದ ಗುಣಮುಖರಾದ ವ್ಯಕ್ತಿಯ ದೇಹದಿಂದ ರೋಗ ನಿರೋಧಕ ಶಕ್ತಿಯನ್ನು ಉಂಟು ಮಾಡುವ ರಕ್ತದ ಕಣಗಳನ್ನು ರೋಗ ಪೀಡಿತ ವ್ಯಕ್ತಿಗೆ ನೀಡುವ ಮೂಲಕ ಆತನನ್ನೂ ಈ ಕಾಯಿಲೆಯಿಂದ ಗುಣಪಡಿಸಬಹುದು. ಡಾ. ವಿಶಾಲ್ ರಾವ್ ಅವರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಐಸಿಎಂಆರ್ ಈಗಾಗಲೇ ಅನುಮತಿ ನೀಡಿದೆ. ಈ ಚಿಕಿತ್ಸೆ ಫಲಕಾರಿಯಾದರೆ ಕೊರೋನಾದಿಂದ ಗುಣಮುಖರಾದವರಿಂದ ಕನಿಷ್ಠ ಇಬ್ಬರು ಮೂವರು ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ಮಾಡಬಹುದು. ರಾಜ್ಯದಲ್ಲಿ ಈಗಾಗಲೇ 129 ಜನ ಕೊರೋನಾದಿಂದ ಗುಣಮುಖರಾಗಿದ್ದು, ಇವರ ಮೂಲಕ ರೋಗ ಪೀಡಿತರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಬಹುದು’ಎಂದು ಹೇಳಿದರು.
ಕೊರೋನಾ ಪೀಡಿತ ವ್ಯಕ್ತಿಗಳಿಗೆ ಪ್ಲಾಸ್ಮಾ ಚಿಕಿತ್ಸೆ..!
Please follow and like us: