ಕೋರ್ಟ್  ಕಲಾಪ ಆರಂಭ

ಬೆಂಗಳೂರು: ಲಾಕ್ ಡೌನ್ ಘೋಷಣೆ ಬಳಿಕ ಸ್ಥಗಿತಗೊಂಡಿದ್ದ ಕರ್ನಾಟಕ ಹೈಕೋರ್ಟ್ ಮತ್ತು ಇತರ ಜಿಲ್ಲಾ ನ್ಯಾಯಾಲಯಗಳ ಕಲಾಪ ಜೂನ್ 1ರಿಂದ ಆರಂಭವಾಗಲಿದೆ. ನ್ಯಾಯಾಲಯ ಕಲಾಪದ ವೇಳೆ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ 38 ಅಂಶಗಳ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ವಕೀಲರು ಮತ್ತು ಸಿಬ್ಬಂದಿಗಳು ಇವುಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ. ಜಿಲ್ಲಾ ನ್ಯಾಯಾಲಯಗಳಿಗೆ ಈ ಮಾರ್ಗಸೂಚಿಗಳನ್ನು ಕಳುಹಿಸಲಾಗಿದೆ.  ನ್ಯಾಯಾಲಯದ ಕಲಾಪಗಳು ಆರಂಭವಾದ ಬಳಿಕ ಬೆಳಗ್ಗೆ 10 ಮತ್ತು ಮಧ್ಯಾಹ್ನದ ಕಲಾಪದಲ್ಲಿ 10 ಪ್ರಕರಣಗಳ ವಿಚಾರಣೆಯನ್ನು ಮಾತ್ರ ನಡೆಸಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ವಕೀಲರು ಮತ್ತು ನ್ಯಾಯಾಧೀಶರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ತಿಳಿಸಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಮಗಳ ತಲೆಯನ್ನೇ ತುಂಡರಿಸಿದ ತಂದೆ

Wed May 27 , 2020
ತೆಹ್ರಾನ್​: ಮಲಗಿದ್ದ ವೇಳೆ ಅಪ್ರಾಪ್ತ ಮಗಳ ತಲೆಯನ್ನು ತಂದೆಯೇ ತುಂಡರಿಸಿದ ಆತಂಕಕಾರಿ ಘಟನೆ ಇರಾನ್​ನಲ್ಲಿ ನಡೆದಿದ್ದು, ಇದೊಂದು ಮರ್ಯಾದೆ ಹತ್ಯೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ರೊಮಿನಾ ಅಶ್ರಫಿ (13) ಮೃತ ದುರ್ದೈವಿ. ಇರಾನ್​ನ ತಲೇಶ್​ ಕೌಂಟಿಯಲ್ಲಿರುವ ತಮ್ಮ ನಿವಾಸದಲ್ಲಿ ರಾತ್ರಿ ಮಲಗಿದ್ದಾಗ ಕುಡುಗೋಲಿನಿಂದ ತಲೆಯನ್ನು ಕತ್ತರಿಸಲಾಗಿದೆ. ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬನ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಆಕೆ ಓಡಿ ಹೋಗಲು ತಯಾರಾಗಿದ್ದಾರಿಂದ ಮರ್ಯಾದೆಗೆ ಅಂಜಿ ಹತ್ಯೆ ಮಾಡಲಾಗಿದೆ. Please […]

Advertisement

Wordpress Social Share Plugin powered by Ultimatelysocial