ಮಂಗಳೂರು: ಕೋವಿಡ್-19 ಸೋಂಕಿನ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ಸಿಗರು ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು .ಮಂಗಳೂರಿನ ಪಕ್ಷದ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 40 ದಿನಗಳಿಂದ ಬಿಜೆಪಿ ಕಾರ್ಯಕರ್ತರು ಕಾರ್ಮಿಕರಿರುವ ಸ್ಥಳಗಳಿಗೆ ಹೋಗಿ ಆಹಾರಗಳನ್ನು ನೀಡುವ ಕೆಲಸ ಮಾಡುತ್ತಿದ್ದಾರೆ. ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ವ್ಯವಸ್ಥೆಯನ್ನ ಮಾಡಲಾಗುತ್ತಿದೆ . ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.ಈಗಾಗಲೇ 1, 610 ಕೋಟಿ ರೂಪಾಯಿ ರಾಜ್ಯ ಸರ್ಕಾರ ಪ್ರಕಟಿಸಿದೆ. ಕಾರ್ಮಿಕರಿಗೆ ಹಲವು ಸರ್ಕಾರ ಅನುದಾನವನ್ನು ಬಿಡುಗಡೆಗೊಳಿಸಿದೆ. ಇಂತಹ ಸಂದರ್ಭಗಳಲ್ಲಿ ಜನರಿಗೆ ವಿಶ್ವಾಸ ತುಂಬುವ ಕೆಲಸ ಮಾಡಬೇಕಾಗಿದೆ. ವಲಸೆ ಕಾರ್ಮಿಕರಿಗೆ ಪ್ರತಿಯೊಬ್ಬರಿಗೆ ಉಚಿತ ಪ್ರಯಾಣ ವ್ಯವಸ್ಥೆ ಮಾಡಲಾಗಿದೆ. ಇನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಕೆಲವೊಂದು ನಿರ್ಧಾರಗಳಿಂದ ಕೋವಿಡ್ _19 ನಿಯಂತ್ರಣಕ್ಕೆ ಬರಲು ಸಾಧ್ಯವಾಗಿದೆ ಎಂದು ಹೇಳಿದರು
ಕೋವಿಡ್ ವಿರುದ್ಧ ನಾವೆಲ್ಲರೂ ಹೋರಾಡಬೇಕಾಗಿದೆ: ಕಟೀಲ್
Please follow and like us: