ದಿನೇ ದಿನೇ ಹೆಚ್ಚುತ್ತಿರುವ ಸೋಂಕಿತರಿಗೆ ಬಹುತೇಕ ಆಸ್ಪತ್ರೆಗಳಲ್ಲಿ ರಾಜಧಾನಿಯಲ್ಲಿ ಬೆಡ್ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಕೇಸರಿ ಪಕ್ಷದ ಪ್ರಭಾವಿ ನಾಯಕರು ಕಾಫಿನಾಡಿನ ರೆಸಾ ರ್ಟ್ವೊಂದರಲ್ಲಿ ಸಭೆ ಸೇರಿ ರಹಸ್ಯ ಮೀಟಿಂಗ್ ಮಾಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದ್ದು, ರಾಜಕೀಯ ವಲಯದಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿರುವ ರೆಸಾ ರ್ಟ್ವೊಂದರಲ್ಲಿ ಕೆಲ ಸಚಿವರು, ಶಾಸಕರು, ಮುಖಂಡರು ರಹಸ್ಯ ಸಭೆ ಮಾಡಿದ್ದಾರೆ. ಈ ಸಭೆಗೆ ಸದ್ಯ ಬೆಂಗಳೂರಿನ ಕೋವಿಡ್ ಉಸ್ತುವಾರಿಯಾಗಿರುವ ಆರ್ ಅಶೋಕ್, ಸಿ.ಟಿ. ರವಿ, ಜಗದೀಶ್ ಶೆಟ್ಟರ್, ಈಶ್ವರಪ್ಪ ಹಾಜರಾಗಿದ್ದು ವಿಶೇಷ. ಅಲ್ಲದೇ ಸತೀಶ್ ರೆಡ್ಡಿ, ಮುನಿರಾಜು, ಕೃಷ್ಣಪ್ಪ ಸೇರಿದಂತೆ ಕೆಲ ಪ್ರಭಾವಿ ನಾಯಕರು ರಾತ್ರೋರಾತ್ರಿ ಹಾಜರಾಗಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ ಎಂದು ಹೇಳಲಾಗಿದೆ.ಎಲ್ಲ ಸಚಿವರು ಒಟ್ಟಿಗೆ ಸೇರಿಲ್ಲ. ಅಶೋಕ್, ಜಗದೀಶ್ ಶೆಟ್ಟರ್ ಪ್ರತ್ಯೇಕ ಕಡೆ ವಾಸ್ತವ್ಯ ಇದ್ದರು. ನಮ್ಮ ಮನೆಯಲ್ಲಿ ನಾನಿದ್ದೆ. ಇಲ್ಲಿ ಒಟ್ಟಾಗಿ ಯಾವುದೇ ಗುಪ್ತ ಸಭೆ ನಡೆಸಿಲ್ಲ ಎಂದು ಸಚಿವರೊಬ್ಬರು ತಿಳಿಸಿದ್ದಾರೆ.ಇನ್ನು ಈ ಸಂಬAಧ ಪ್ರತಿಕ್ರಿಯೆ ನೀಡಿರುವ ಸಚಿವ ಅಶೋಕ್ ಕೂಡ ತಾವು ಯಾವುದೇ ಗುಪ್ತಸಭೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಪ್ರಭಾವಿ ಸಚಿವರೆಲ್ಲರೂ ಒಟ್ಟಾಗಿ ಸೇರಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ ಅವರ ಕಾರ್ಯ ವೈಖರಿ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕೋವಿಡ್ ಸೋಂಕಿತರಿಗೆ ಬೆಡ್ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ
Please follow and like us: