ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯ ಉಪಾಧ್ಯಕ್ಷ ಮಜೀದ್ ಖಾನ್ ಅವರು, ರಾಜ್ಯ ಸರ್ಕಾರವು ಕೋವಿಡ್-೧೯ ನಿರ್ವಹಣೆಗಾಗಿ ಇಲ್ಲಿಯವರೆಗೆ ಮೂರು ಸಾವಿರದ ಮುನ್ನೂರ ತೊಂಬತ್ತೆರಡು (೩೩೯೨) ಕೋಟಿ ರೂಪಾಯಿ ಖರ್ಚು ಮಾಡಿರುವುದಾಗಿ ಹೇಳಿಕೊಂಡಿದೆ. ಯಾವ ಯಾವ ವಿಷಯಕ್ಕೆ ಎಷ್ಟು ಖರ್ಚು ಮಾಡಲಾಗಿದೆ ಮಾಹಿತಿ ಹಕ್ಕು (ಖಖಿI) ಮೂಲಕ ಕೇಳಿದಾಗ ಆಡಿಟ್ ಆಗಬೇಗು ಎಂಬ ಮಾಹಿತಿಯನ್ನು ರವಾನಿಸುವ ಮೂಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ ೫೦೦ ಮಿ.ಲಿ ಸ್ಯಾನಿಟೈಸರ್ ಒಂದಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಅಂಗಸAಸ್ಥೆ ‘ಕರ್ನಾಟಕ ಲಾಜಿಸ್ಟಿಕ್ ಲಿಮಿಟೆಡ್’ ಸಂಸ್ಥೆಯು ರುಪಾಯಿ ೭೮ ರಂತೆ ಪೂರೈಕೆ ಮಾಡಬಹುದು ಎಂದು ಟೆಂಡರ್ ಕರೆದಾಗ ಹೇಳಿಕೊಂಡಿದೆ. ಆದರೆ ಅವರನ್ನು ಹೊರತುಪಡಿಸಿ ಒಂದು ಚಿಕ್ಕ ಬಾಟಲ್ ಸ್ಯಾನಿಟೈಸರಿಗೆ ೬೦೦ ರೂ.ಯಂತೆ ಖರೀದಿ ಮಾಡಿದ್ದಾರೆ. ಅದೇ ರೀತಿ ಒಂದು ಥರ್ಮಲ್ ಸ್ಕ್ಯಾನರ್ ಬೆಲೆ ಗರಿಷ್ಠ ೩,೬೫೦ ಮಾತ್ರ. ಆದರೆ ಇವರು ಉಲ್ಲೇಖ ಮಾಡಿರುವಂತಹದ್ದು ೯,೦೦೦ ರೂಪಾಯಿ ಎಂದು ಅವರು ವಿವರಿಸಿದ್ದಾರೆ.
ಕೋವಿಡ್-೧೯ ಹೆಸರಿನಲ್ಲಿ ಮೂರು ಸಾವಿರ ಕೋಟಿ ಹಗರಣ
Please follow and like us: