ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಹಿಂಜರಿದರೆ ಕ್ರಮ- ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಕೆ

ಕೊರೊನಾ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಕೂಡಾ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಖಾಸಗಿ ವೈದ್ಯರಿಗೆ ಸಹಕಾರ ನೀಡಲು ಕೋರಿಕೊಳ್ಳಲಾಗುವುದು ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳು ಈ ಕಠಿಣ ಸಂದರ್ಭದಲ್ಲಿ ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿಯಬಾರದು. ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಸಲಹೆಗಳ ಪ್ರಕಾರ ಪ್ರತಿಯೊಬ್ಬ ನಾಗರಿಕರು ಕಡ್ಡಾಯವಾಗಿ ಮಾಸ್ಕ್ ಬಳಸಿ, ಸಾಮಾಜಿಕ ಅಂತರ ಕಾಪಾಡಿಕೊಂಡರೆ ಸೋಂಕು ತಡೆಯಬಹುದು. ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ವಾಟ್ಸ್ಆ್ಯಪ್, ಫೋನ್ ಹಾಗೂ ಈ-ಮೇಲ್ ಮೂಲಕ ಜನಸ್ಪಂಧನೆ ಮಾಡಬೇಕು ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಗುತ್ತಿಗೆ ಆಧಾರಿತ ವೈದ್ಯರ ಸೇವೆ ಖಾಯಂ..! -ಶ್ರೀರಾಮುಲು ಭರವಸೆ

Wed Jul 8 , 2020
ಗುತ್ತಿಗೆ ವೈದ್ಯರನ್ನು ಒಂದು ತಿಂಗಳೊಳಗೆ ಕಾಯಂ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗುತ್ತಿಗೆ ಆಧಾರಿತ ವೈದ್ಯರನ್ನು ಖಾಯಂಗೊಳಿಸಲು ಸಿಎಂ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಈ ವಿಚಾರವನ್ನು ನಾಳೆ ಕ್ಯಾಬಿನೆಟ್ ಸಭೆಯಲ್ಲಿ ಪ್ರಸ್ತಾಪಿಸಲಾಗುತ್ತದೆ. ೨೦೧೭ ರಿಂದ ಗುತ್ತಿಗೆ ಆಧಾರಿತ ವೈದ್ಯರನ್ನು ಖಾಯಂಗೊಳಿಸಿಲ್ಲ. ಕೊರೊನಾದಂತಹ ಕಷ್ಟಕರ ಸಮಯದಲ್ಲೂ ಈ ವೈದ್ಯರು ಕರ್ತವ್ಯ ನಿರ್ವಹಿಸಿದ್ದಾರೆ. ಹೀಗಾಗಿ ಶೀಘ್ರವೇ ಈ ವೈದ್ಯರ ಸೇವೆಯನ್ನು ಖಾಯಂಗೊಳಿಸಲಾಗುತ್ತದೆ ಎಂದು ಭರವಸೆ ನೀಡಿದರು. […]

Advertisement

Wordpress Social Share Plugin powered by Ultimatelysocial