ಗಾಳಿಯ ರಭಸಕ್ಕೆ ಮುಗುಚಿ ಬಿದ್ದ ದೋಣಿ

ಸಮುದ್ರದಲ್ಲಿ ಮೀನು ಹಿಡಿಯಲು ತೆರಳಿದ್ದ ಮೀನುಗಾರರ ದೋಣಿ ಮುಗುಚಿ ಬಿದ್ದಿದ್ದು ಮೀನುಗಾರರೆಲ್ಲರು ಈಜಿ ದಡ ಸೇರಿದ್ದಾರೆ ಅದೃಷ್ಟವಶಾತ್ ಯಾವುದೇ ರೀತಿಯ ಸಾವು ನೋವ್ವುಗಳು ಸಂಭವಿಸಿಲ್ಲ. ಗಾಳಿಯ ರಭಸಕ್ಕೆ ದೋಣಿ ಮುಗುಚಿ ಬಿದ್ದಿದೆ ಎಂದು ಹೇಳಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸಸಿಹಿತ್ಲುವಿನಲ್ಲಿ ಮೀನುಗಾರರಾದ ಸುಧಾಕರ್, ತಾರಾನಾಥ್, ಹೇಮನಾಥ್ ಮತ್ತಿತರರು ಮೀನು ಹಿಡಿಯಲೆಂದು ಸಮುದ್ರಕ್ಕೆ ತೆರಳಿದ್ದರು. ಆದರೆ, ಸಮುದ್ರ ಮಧ್ಯೆ ಹವಾಮಾನ ವೈಪರಿತ್ಯದ ಕಾರಣದಿಂದ ದೋಣಿಯು ಮಗುಚಿ ಬಿದ್ದಿದೆ. ಇದರಲ್ಲಿದ್ದ ಮೂರು ಮಂದಿ ಈಜಿಕೊಂಡು ದಡ ಸೇರಿದ್ದು, ಇನ್ನಿಬ್ಬರನ್ನು ಮತ್ತೊಂದು ದೋಣಿಯ ಮೂಲಕ ರಕ್ಷಿಸಲಾಗಿದೆ. ಉಳಿದ ಒಬ್ಬ ಮೀನುಗಾರ ಉತ್ತರ ದಿಕ್ಕಿನಲ್ಲಿ ಸಾಗುತ್ತಿದ್ದ ದೋಣಿಯವರೆಗೆ ಈಜಿಕೊಂಡು ಸಾಗಿ ಸ್ವಯಂ ರಕ್ಷಣೆಗೊಳಗಾಗಿದ್ದಾರೆ. ಅವರು ಆ ದೋಣಿಯ ಮೂಲಕ ಸುರಕ್ಷಿತವಾಗಿ ದಡಕ್ಕೆ ಸೇರಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಸೆಪ್ಟೆಂಬರ್‌ನಲ್ಲಿ ಐಪಿಎಲ್ ನಡೆಯುವ ಸಾಧ್ಯತೆ

Fri Jul 24 , 2020
ಕೊರೊನಾ ಕಾರಣದಿಂದಾಗಿ ಮುಂದೂಡಲಾಗಿದ್ದ ಐಪಿಎಲ್ ಟೂರ್ನಿ ಸೆಪ್ಟೆಂಬರ್‌ನಲ್ಲಿ ನಡೆಯುವ ಸಾಧ್ಯತೆ ಇದ್ದು ಸೆಪ್ಟೆಂಬರ್ ೧೮ರಂದು ಟೂರ್ನಿ ನಡೆಯುವ ಸಾಧ್ಯತೆ ಇದ್ದು ೫೧ ದಿನಗಳ ಕಾಲ ಟೂರ್ನಿ ನಡೆಯಲಿದೆ ಎಂದು ತಿಳಿದುಬಂದಿದೆ. ಕೊರೊನಾ ಕಾರಣದಿಂದಾಗಿ ಟಿ-೨೦ ವಿಶ್ವಕಪ್ ಮುಂದೂಡಿದ ಬೆನ್ನಲ್ಲೆ ಬಿಸಿಸಿಐ ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದೆ. ಆಸ್ಟೆçÃಲಿಯಾದಲ್ಲಿ ನಡೆಯಬೇಕಗಿದ್ದ ಟಿ-೨೦ ವಿಶ್ವಕಪ್ ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ. Please follow and like us:

Advertisement

Wordpress Social Share Plugin powered by Ultimatelysocial