ಗುಟ್ಟಾಗಿ ಎಂಗೇಜ್​ಮೆಂಟ್​ ಮಾಡಿಕೊಂಡ ಅದಿತಿ ಪ್ರಭುದೇವ?; ಕನಸು ನನಸಾಯ್ತು ಎಂದ ನಟಿ

ಗುಟ್ಟಾಗಿ ಎಂಗೇಜ್​ಮೆಂಟ್​ ಮಾಡಿಕೊಂಡ ಅದಿತಿ ಪ್ರಭುದೇವ?; ಕನಸು ನನಸಾಯ್ತು ಎಂದ ನಟಿ
ಅದಿತಿ ಹೊಸ ಫೋಟೋ ಪೋಸ್ಟ್​ ಮಾಡಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್​ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ.ನಟಿ ಅದಿತಿ ಪ್ರಭುದೇವ ಅವರು ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಕಿರುತೆರೆಯಿಂದ ಬಣ್ಣದ ಬದುಕು ಆರಂಭಿಸಿದ ಅವರು ಈಗ ಹಿರಿತೆರೆಯಲ್ಲಿ ಮಿಂಚುತ್ತಿದ್ದಾರೆ.

ಈಗ ಅವರ ಕಡೆಯಿಂದ ಗುಡ್​ನ್ಯೂಸ್​ ಸಿಕ್ಕಿದೆ! ಅವರು ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ಅವರು ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಈ ಫೋಟೋದಲ್ಲಿ ಉಂಗುರ ಹೈಲೈಟ್​ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಹೇಳುತ್ತಿದ್ದಾರೆ. ನಿಜಕ್ಕೂ ಅವರು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

ಭಾನುವಾರ (ಡಿಸೆಂಬರ್​ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರಿಗೆ ಅಷ್ಟೇ ಆಹ್ವಾನ ಇತ್ತು ಎಂದು ಮೂಲಗಳು ತಿಳಿಸಿವೆ. ಫೋಟೋದಲ್ಲಿರುವ ಹುಡುಗ ಉದ್ಯಮಿ ಆಗಿದ್ದು, ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.

ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಪೋಸ್ಟ್​ ಮಾಡಿರುವ ಅದಿತಿ, ‘ಒಂದು ಕನಸಿನಂತೆ ಈ ಕನಸು ನನಸಾಯಿತು’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋದಲ್ಲಿ ಅದಿತಿ ಕೈಯಲ್ಲಿರುವ ಉಂಗುರ ಹೈಲೈಟ್​ ಆಗಿದೆ. ಸದ್ಯ, ಈ ವಿಚಾರದ ಬಗ್ಗೆ ಅದಿತಿ ಮೌನ ವಹಿಸಿದ್ದಾರೆ. ಅವರ ಕಡೆಯಿಂದ ಈ ಬಗ್ಗೆ ಪ್ರತಿಕ್ರಿಯೆ ಬರಬೇಕಿದೆ.

ಇತ್ತೀಚೆಗೆ ಅದಿತಿ ನಟನೆಯ ‘ಆನ’ ಸಿನಿಮಾ ತೆರೆಗೆ ಬಂದಿತ್ತು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅಲ್ಲದೆ, ದೊಡ್ಡದೊಡ್ಡ ಸಿನಿಮಾಗಳು ಕೂಡ ಇದೇ ಸಂದರ್ಭದಲ್ಲಿ ರಿಲೀಸ್​ ಆಗಿದ್ದರಿಂದ ಈ ಚಿತ್ರಕ್ಕೆ ಹೆಚ್ಚು ಚಿತ್ರಮಂದಿರ ಸಿಕ್ಕಿರಲಿಲ್ಲ.

ಬೆಳಗಾವಿಯಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಆದ ಬಗ್ಗೆ ಅದಿತಿ ಮಾತನಾಡಿದ್ದರು. ‘ಕನ್ನಡ ಭಾಷೆ ಮತ್ತು ಧ್ವಜಕ್ಕೆ ಅವಮಾನ ಮಾಡಿದ್ರೆ ನಮ್ಮ ತಾಯಿಗೆ ಅವಮಾನ ಆದಂತೆ. ಸಾಮಾನ್ಯವಾಗಿ ನಮ್ಮ ತಾಯಿಗೆ ಯಾರಾದ್ರೂ ಸ್ವಲ್ಪ ಅಗೌರವ ತೋರಿಸಿದ್ದರೂ ನಾವು ಸಾಯ್ಸೋಕೂ ಹೇಸಲ್ಲ. ಅಷ್ಟು ಕೋಪ ಬರುತ್ತದೆ. ಅಂಥದ್ರಲ್ಲಿ ಕೋಟ್ಯಂತರ ಜನರ ತಾಯಿ ಕನ್ನಡಾಂಬೆಗೆ ಅವಮಾನ ಆಗಿದ್ದರೂ ನಾವು ಸುಮ್ಮನೆ ಇದ್ದೀವಿ ಅಂದ್ರೆ ನಾವು ಎಂಥವರು? ಅ ಪದ ಉಪಯೋಗಿಸೋಕೆ ನನಗೆ ಇಷ್ಟ ಇಲ್ಲ. ನಾವು ಅಂಥವರು ಅಂತ ಸಾಬೀತು ಮಾಡೋದು ಬೇಡ. ಎಲ್ಲರೂ ಒಟ್ಟಾಗಿ ಶಾಂತಿಯುತವಾಗಿ, ಸೂಕ್ತ ಮಾರ್ಗದಲ್ಲಿ ಇದಕ್ಕೆಲ್ಲ ಅಂತ್ಯ ಹಾಡಬೇಕು. ಒಂದು ದಿನ ಬಂದ್​ ಮಾಡಿ ಸುಮ್ಮನಾಗುವುದಲ್ಲ’ ಎಂದು ಅದಿತಿ ಪ್ರಭುದೇವ ಹೇಳಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಒಂದೇ ಕುಟುಂಬದ 9 ಮಂದಿ ಘರ್ ವಾಪಸಿ; ಮಾತೃ ಧರ್ಮಕ್ಕೆ ಮರಳಿದ ಮತಾಂತರಗೊಂಡಿದ್ದ ಕುಟುಂಬ

Mon Dec 27 , 2021
ಶಿವಮೊಗ್ಗ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಒಂದೇ ಕುಟುಂಬದ 9 ಸದಸ್ಯರು ಮರುಮತಾಂತರಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಅಂತರಗಂಗೆಯಲ್ಲಿ ನಡೆದಿದೆ. ಜಯಶೀಲನ್ ಹಾಗೂ ಕುಟುಂಬ ಸದಸ್ಯರು ಮಾತೃಧರ್ಮಕ್ಕೆ ವಾಪಸ್ ಆಗಿದ್ದು, ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ನೇತೃತ್ವದಲ್ಲಿ ಘರ್ ವಾಪಸಿ ಕಾರ್ಯಕ್ರಮದ ಮೂಲಕ ಮತಾಂತರಗೊಂಡವರನ್ನು ಮರಳಿ ಹಿಂದೂ ಧರ್ಮಕ್ಕೆ ಬರಮಾಡಿಕೊಳ್ಳಲಾಯಿತು. ಜಯಶೀಲನ್, ಪತ್ನಿ ಜಯಮ್ಮ, ಪ್ರಭಾಕರನ್, ಲಲಿತಾ ಪ್ರಭಾಕರನ್, ಪ್ರಕಾಶ್, ಶ್ವೇತಾ ಪ್ರಕಾಶ್ ಹಾಗೂ ಮಕ್ಕಳಾದ ಭರತ್ ಕುಮಾರ್, ಭಾವನಾ, ಪೃಥ್ವಿ […]

Advertisement

Wordpress Social Share Plugin powered by Ultimatelysocial