ಗುತ್ತಿಗೆ ಆಧಾರಿತ ವೈದ್ಯರ ಸೇವೆ ಖಾಯಂ..! -ಶ್ರೀರಾಮುಲು ಭರವಸೆ

ಗುತ್ತಿಗೆ ವೈದ್ಯರನ್ನು ಒಂದು ತಿಂಗಳೊಳಗೆ ಕಾಯಂ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗುತ್ತಿಗೆ ಆಧಾರಿತ ವೈದ್ಯರನ್ನು ಖಾಯಂಗೊಳಿಸಲು ಸಿಎಂ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಈ ವಿಚಾರವನ್ನು ನಾಳೆ ಕ್ಯಾಬಿನೆಟ್ ಸಭೆಯಲ್ಲಿ ಪ್ರಸ್ತಾಪಿಸಲಾಗುತ್ತದೆ. ೨೦೧೭ ರಿಂದ ಗುತ್ತಿಗೆ ಆಧಾರಿತ ವೈದ್ಯರನ್ನು ಖಾಯಂಗೊಳಿಸಿಲ್ಲ. ಕೊರೊನಾದಂತಹ ಕಷ್ಟಕರ ಸಮಯದಲ್ಲೂ ಈ ವೈದ್ಯರು ಕರ್ತವ್ಯ ನಿರ್ವಹಿಸಿದ್ದಾರೆ. ಹೀಗಾಗಿ ಶೀಘ್ರವೇ ಈ ವೈದ್ಯರ ಸೇವೆಯನ್ನು ಖಾಯಂಗೊಳಿಸಲಾಗುತ್ತದೆ ಎಂದು ಭರವಸೆ ನೀಡಿದರು.

Please follow and like us:

Leave a Reply

Your email address will not be published. Required fields are marked *

Next Post

ಸಿದ್ದರಾಮಯ್ಯ ಆರೋಪಕ್ಕೆ ಸಿ.ಟಿ ರವಿ ಟಾಂಗ್

Wed Jul 8 , 2020
ಕಾಂಗ್ರೆಸ್ ಸರ್ಕಾರ ಇದ್ದಾಗ ಹಾಸಿಗೆ ದಿಂಬು ಹಗರಣದಲ್ಲಿ ಕೋಟ್ಯಂತರ ಹಣ ಲೂಟಿ ಮಾಡಿದ್ದಾರೆ ಎಂದು ಸಚಿವ ಸಿ.ಟಿ.ರವಿ, ಆರೋಪಿಸಿದ್ದಾರೆ. ವೈದ್ಯಕೀಯ ಸಾಮಗ್ರಿ ಖರೀದಿ ವಿಚಾರದಲ್ಲಿ ಸರ್ಕಾರ ಭ್ರಷ್ಟಾಚಾರ ಮಾಡಿದೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಬರೀ ಇಂಥವೇ ಕಾಣುತ್ತವೆಯೇ. ಸುಳ್ಳನ್ನೇ ಮನೆ ದೇವರನ್ನಾಗಿ ಮಾಡಿಕೊಂಡ ಕಾಂಗ್ರೆಸ್‌ನವರು ಬರೀ ಇಂತಹ ಸುಳ್ಳುಗಳನ್ನೇ ಹೇಳಿಕೊಂಡು ತಿರುಗುತ್ತಿದ್ದಾರೆ. ಕೊರೋನಾ ಬಂದ ಹೊಸದರಲ್ಲಿ ಸರ್ಜಿಕಲ್ ಮಾಸ್ಕ್ಗಳು ಮಾತ್ರಾ […]

Advertisement

Wordpress Social Share Plugin powered by Ultimatelysocial