ಜನರು ಅಸ್ವಸ್ಥ ಪಂಜಾಬ್ನ ತಾರ್ನ್ ತರಣ್ನ ಗುರುದ್ವಾರದಲ್ಲಿ ಪ್ರಸಾದ ಸೇವಿಸಿದ ನಂತರ ಕನಿಷ್ಠ 10 ಜನ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಅಮೃತಸರ ಮೂಲದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗಷ್ಟೆ ನಿಧನರಾದ ತಾಯಿಗಾಗಿ ರಘುವೀರ್ ಸಿಂಗ್ ಎನ್ನುವವರು ಆಯೋಜಿಸಿದ್ದ ಸುಖಮಣಿ ಸಾಹಿಬ್ ಪ್ರವಚನದಲ್ಲಿ ಈ ಘಟನೆ ನಡೆದಿದೆ. ಅವರ ಮನೆಯಲ್ಲಿ ಪ್ರಾರ್ಥನಾ ಪ್ರವಚನವನ್ನು ಆಯೋಜಿಸಲಾಗಿತ್ತು. ಪ್ರಾರ್ಥನೆಯ ಪ್ರವಚನದ ನಂತರ ರಘುವೀರ್ ಸಿಂಗ್ ಅವರ ಕುಟುಂಬ ಸದಸ್ಯರು ಪ್ರಸಾದ ವಿತರಿಸಿದರು. ಉಳಿದಿರುವ ಪ್ರಸಾದವನ್ನು ಗುರುದ್ವಾರಕ್ಕೆ ಕೊಂಡೊಯ್ಯಲಾಯಿತು, ಅಲ್ಲಿನ ಗ್ರಂಥಿ ತನ್ನ ಮಕ್ಕಳು ಮತ್ತು ಇತರ ಭಕ್ತರಿಗೆ ಪ್ರಸಾದ ವಿತರಿಸಿದರು. ಅವರಲ್ಲಿ 10 ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುದ್ವಾರಕ್ಕೆ ಕೊಂಡೊಯ್ಯುತ್ತಿರುವಾಗ ಉಳಿದಿರುವ ಪ್ರಸಾದಕ್ಕೆ ವಿಷಕಾರಿ ಪದಾರ್ಥ ಸೇರಿಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದು, ತನಿಖೆ ನಡೆಸಲಾಗುತ್ತಿದೆ.